ಗದಗ:- ಭ್ರಷ್ಟ ಪುರಸಭೆ ಸದಸ್ಯರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೇಟ್ಟಿ ಬಣದಿಂದ ಪ್ರತಿಭಟನೆ ಜರುಗಿದೆ.
ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಪುರಸಭೆಗೆ ದಿಢೀರ್ ಮುತ್ತಿಗೆ ಹಾಕಿದ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಇನ್ನೂ ಸದಸ್ಯರನ್ನ ಅಮಾನತುಗೊಳಿಸುವಂತೆ ಹಲವು ಬಾರಿ ಆಗ್ರಹಿಸಿದರು. ಅದರೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರ ಹಾಕಲಾಗಿದೆ.
ಪುರಸಭೆ ಸದಸ್ಯರ ಮಕ್ಕಳೂ ಸಹ ಗುತ್ತಿಗೆದಾರರಾಗಿದ್ದು ಕಾನೂನು ಬಾಹೀರ ಎಂದು ಆರೋಪಿಸಿದ್ದಾರೆ. ಅಭಿವೃದ್ಧಿಗೆ ಬೇಕಾದ ಸಾಮಗ್ರಿಗಳನ್ನ ತಮ್ಮ ಸ್ವಂತಕ್ಕೆ ಬಳಕೆ ಆರೋಪ ಮಾಡಲಾಗಿದೆ.ಪುರಸಭೆ ಸದಸ್ಯೆ ಜಯಕ್ಕ ಕಳ್ಳಿ ವಿರುದ್ಧ ಕಾರ್ಯಕರ್ತರ ಆರೋಪಿಸಿದ್ದಾರೆ. ಇಂತಹ ಸದಸ್ಯರ ವಿರುದ್ಧ ಕಾನೂನು ಕ್ರಮಕ್ಕೆ ಕರವೇ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ಆಗ್ರಹಿಸಿದರು.