ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಕೇಸ್ ಹೆಚ್ಚಾಗಿದೆ.
ಜೈಲಿನ ಜಾಮರ್ ಪರಿಣಾಮ…ನೋ ಇನ್ ಕಮಿಂಗ್ ನೋ ಜೌಟ್ ಗೋಯಿಂಗ್..ಜನರನ್ನು ಒಕ್ಕಲೆಬ್ಬಿಸಲು ನಡಿತಿದಿಯ ಹುನ್ನಾರ!
ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಮುಂದಾಗಿದೆ. ಡೆಂಗ್ಯೂ ಪ್ರಕರಣ ನಿಯಂತ್ರಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನರ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ಸೊಳ್ಳೆ ನಿಯಂತ್ರಣ ಕುರಿತು ಅರಿವು ಮೂಡಿಸುವ ಹಾಗೂ ಔಷಧಿ ಸಿಂಪಡಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ.
ಬೆಂಗಳೂರು ಪೂರ್ವ ವಲಯದ ರಾಮಸ್ವಾಮಿ ಪಾಳ್ಯದಲ್ಲಿ ಜಾಗೃತಿ ಅಭಿಯಾನ ನಡೆಸಲಾಗಿದೆ. ಬಿಬಿಎಂಪಿ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ಅವರು ಸಹ ಈ ಅಭಿಯಾನದಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಲಹೆ ನೀಡಿದ್ದಾರೆ.
ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ (Mosquito) ಸಂತತಿ ಹೆಚ್ಚಾಗಲಿದ್ದು, ಅದನ್ನು ಫಾಗಿಂಗ್ ಮತ್ತು ಔಷಧಿ ಸಿಂಪಡಿಸುವ ಮೂಲಕ ತಡೆಯಬೇಕು. ಹೂವಿನ ಕುಂಡ, ಬಿಸಾಕಿದ ಟೈರ್, ನೀರು ಸಂಗ್ರಹಿಸುವ ತೊಟ್ಟಿ, ನೀರಿನ ಬಾಟಲ್ ಸೇರಿದಂತೆ ಇನ್ನಿತರ ಕಡೆಯಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಅಂತಹ ಸ್ಥಳಗಳಲ್ಲಿ ಎಚ್ಚರಿಕೆ ಕೊಳಚೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.
ಮೇ 1 ರಿಂದ 13ರ ವರೆಗೆ ದಾಖಲಾದ ಡೆಂಗ್ಯೂ ಪ್ರಕರಣಗಳು – ಯಾವ ವಲಯದಲ್ಲಿ ಎಷ್ಟು ಕೇಸ್?
ಬೊಮ್ಮನಹಳ್ಳಿ: 23
ಪೂರ್ವ: 41
ಮಹದೇವಪುರ: 44
ಆರ್.ಆರ್ ನಗರ: 08
ದಕ್ಷಿಣ: 34
ಪಶ್ಚಿಮ: 16
ಯಲಹಂಕ: 06
ದಾಸರಹಳ್ಳಿ: 00
ಒಟ್ಟು: 172 ಪ್ರಕರಣ