ಡೆಂಗ್ಯೂ ಆರ್ಭಟ: ಶಿವಮೊಗ್ಗದಲ್ಲಿ ಮಹಿಳೆ ಬಲಿ!

ಶಿವಮೊಗ್ಗ:- ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯಲ್ಲಿ ಶಂಕಿತ ಡೆಂಗ್ಯೂಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಜರುಗಿದೆ. ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ: ಭಾರತೀಯರಿಗೆ ಪ್ರಶಸ್ತಿ ಅರ್ಪಿಸಿದ PM ರಶ್ಮಿ ಆರ್.ನಾಯಕ್ (42) ಮೃತ ಮಹಿಳೆ ಎನ್ನಲಾಗಿದೆ. ಕಳೆದ 15 ದಿನಗಳಿಂದ ರಶ್ಮಿ ತೀವ್ರ ಜ್ವರದಿಂದ ಬಳಲುತ್ತಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಶ್ಮಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.