ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲಾದ್ಯಂತ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದರು. ನೂತನ ತಾಲೂಕು ಕುರುಗೋಡಿನ ದಮ್ಮೂರು ಗ್ರಾಮ ಪಂಚಾಯಿತಿಯಲ್ಲಿ ಘಟನೆ ನಡೆದಿದೆ. ಬೇಸಿಗೆ ಪ್ರಾರಂಭವಾದ ದಿನದಿಂದ ಕುಡಿಯುವ ನೀರಿಗಾಗಿ ಜನರು ಪರದಾಟ ನಡೆಸುತ್ತಿದ್ದು,
ಖಾಸಗಿಯವರ ಬಳಿ ದುಡ್ಡುಕೊಟ್ಟು ಖರೀದಿ ಮಾಡಿ ನೀರು ಕೊಳ್ಳಬೇಕು, ಇಲ್ಲ ಅಂದ್ರೆ ಈ ಗ್ರಾಮಕ್ಕೆ ಕುಡಿಯಲು ನೀರೆ ಇಲ್ಲ, ನೀರಿಲ್ಲದೇ ಇರುವುದರಿಂದ ಗ್ರಾಮಸ್ಥರಿಗೆ ಬೇರೆ ಮಾರ್ಗವೇ ಇಲ್ಲ, ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಬೇಸಿಗೆ ಕುಡಿಯುವ ನೀರಿಗಾಗಿ ಮುನ್ನಚ್ಚೆರಿಕೆ ಕ್ರಮ ಕೈಗೊಂಡಿಲ್ಲ ಎಂದು ಖಾಲಿ ಕೊಡಗಳನ್ನು ಹಿಡಿದು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದರು.
ಗ್ರಾಮ ಪಂಚಾಯಿತಿ ಸಿಬ್ಬಂದಿ ಸರಿಯಾದ ಉತ್ತರ ಕೊಡದೇ ಬಾಗಿಲು ಹಾಕುತ್ತಿದ್ದಾರೆ. ಗ್ರಾಮ ಪಂಚಾಯಿತಿ ಕಾರ್ಯವೈಖರಿಯನ್ನು ವಿರೋಧಿ ಸಾರ್ವಜನಿಕರಿಂದ ಮುತ್ತಿಗೆ ಹಾಕಿದ್ದು, ನೀರು ಕೊಡುವಂತೆ ಆಗ್ರಹಿಸಿ ಮಹಿಳೆಯರು ಗ್ರಾಮ ಪಂಚಾಯಿತಿ ಕಚೇರಿಯ ಮುಂದೆ ಖಾಲಿಕೊಡ ಹಿಡಿದು ಪ್ರತಿಭಟನೆ ನಡೆಸಿದರು.