ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗೆದ್ದರೂ ರೋಹಿತ್ ಶರ್ಮಾ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ನಿಮ್ಮ ಮಗು ಮೊಬೈಲ್ ಗೆ ಅಡಿಕ್ಟ್ ಆಗಿದ್ಯಾ!?.. ಚಿಂತೆ ಬಿಡಿ ಈ ಟ್ರಿಕ್ಸ್ ಫಾಲೋ ಮಾಡಿ..!
ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬೌಲಿಂಗ್ ಆಯ್ದುಕೊಂಡಿತು. ನಿರೀಕ್ಷೆಯಂತೆ ಬೌಲರ್ಗಳ ಬಿಗು ದಾಳಿಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಐರ್ಲೆಂಡ್ ಬ್ಯಾಟರ್ಗಳು ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದರು.
ಮೂರನೇ ಓವರ್ನಲ್ಲಿ 2 ವಿಕೆಟ್ ಕಬಳಿಸುವ ಮೂಲಕ ಆರ್ಷದೀಪ್ ಸಿಂಗ್ ಐರ್ಲೆಂಡ್ಗೆ ಆರಂಭಿಕ ಆಘಾತ ನೀಡಿದರೆ, ಆ ಬಳಿಕ ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರೀತ್ ಬುಮ್ರಾ ಕೂಡ ಉತ್ತಮ ದಾಳಿ ಸಂಘಟಿಸಿದರು. ಪರಿಣಾಮ 44 ರನ್ಗಳಿಸುವಷ್ಟರಲ್ಲಿ ಐರ್ಲೆಂಡ್ ತಂಡವು 5 ವಿಕೆಟ್ ಕಳೆದುಕೊಂಡಿತು.
ಈ ಹಂತದಲ್ಲಿ ಡೆಲಾನಿ 14 ಎಸೆತಗಳಲ್ಲಿ 26 ರನ್ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾಗಿ ನಿಂತರು. ಇದಾಗ್ಯೂ 16 ಓವರ್ಗಳಲ್ಲಿ ಐರ್ಲೆಂಡ್ ತಂಡವನ್ನು 96 ರನ್ಗಳಿಗೆ ಆಲೌಟ್ ಮಾಡುವಲ್ಲಿ ಟೀಮ್ ಇಂಡಿಯಾ ಬೌಲರ್ಗಳು ಯಶಸ್ವಿಯಾದರು. ಟೀಮ್ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ 3 ವಿಕೆಟ್ ಕಬಳಿಸಿದರೆ, ಅರ್ಷದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.
ಈ ಗೆಲುವಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಈ ಪಿಚ್ನಲ್ಲಿ ಏನಾಗಲಿದೆ ಎಂದು ಹೇಳಲಾಗುವುದಿಲ್ಲ. ಇದು ಕೇವಲ ಐದು ತಿಂಗಳ ಹಳೆಯ ಪಿಚ್. ಇಲ್ಲಿ ಆಡುವುದು ಸುಲಭವಲ್ಲ. ಈ ಪಿಚ್ ಬೌಲರ್ಗಳಿಗೆ ಹೆಚ್ಚು ಸಹಕಾರಿಯಾಗಿದೆ. ಹೀಗಾಗಿ ಇಲ್ಲಿ ಬಿಗ್ ಶಾಟ್ಗಳನ್ನು ಹೊಡೆಯುವುದರಿಂದ ಸ್ಕೋರ್ಗಳಿಸಬಹುದು. ಹಾಗೆಯೇ ಈ ಪಿಚ್ನಲ್ಲಿ ಆಡಬೇಕಿದ್ದರೆ ಅನುಭವ ಕೂಡ ಬೇಕಾಗುತ್ತದೆ ಎಂದರು.
ನಮ್ಮಲ್ಲಿ ಅರ್ಷದೀಪ್ ಸಿಂಗ್ ಅವರನ್ನು ಹೊರತುಪಡಿಸಿ ಬೇರೆ ಎಲ್ಲರೂ ಟೆಸ್ಟ್ ಆಡಿದ ಅನುಭವ ಹೊಂದಿದ್ದಾರೆ. ಇದು ನಮಗೆ ನೆರವಾಯಿತು ಎಂಬುದು ನನ್ನ ಭಾವನೆ. ಹಾಗೆಯೇ ಈ ಪಿಚ್ನಲ್ಲಿ ನಾಲ್ವರು ಸ್ಪಿನ್ನರ್ಗಳನ್ನು ಆಡಿಸುತ್ತೇನೆ ಎಂದು ನೀವು ಭಾವಿಸಬೇಡಿ ಎಂದು ರೋಹಿತ್ ಶರ್ಮಾ ಹೇಳಿದರು. ಈ ಪಂದ್ಯಕ್ಕೂ ಮುನ್ನ ನಾಲ್ವರು ಸ್ಪಿನ್ನರ್ಗಳನ್ನು ಕಣಕ್ಕಿಳಿಸುವ ಬಗ್ಗೆ ಟೀಮ್ ಇಂಡಿಯಾ ನಾಯಕ ಸೂಚನೆ ನೀಡಿದ್ದರು. ಆದರೀಗ ಈ ನಿರ್ಧಾರವನ್ನು ಬದಲಿಸಿದ್ದೇನೆ ಎಂದು ತಿಳಿಸಿದ್ದಾರೆ.
ನಿಜ ಹೇಳಬೇಕೆಂದರೆ, ಈ ಪಿಚ್ನಿಂದ ಏನನ್ನು ನಿರೀಕ್ಷಿಸಬಹುದು ಎಂದು ನನಗೆ ತಿಳಿದಿಲ್ಲ. ಪರಿಸ್ಥಿತಿಗೆ ತಕ್ಕಂತೆ ನಾವು ಸಿದ್ಧಗೊಳ್ಳಬೇಕಾಗುತ್ತದೆ. ಹೀಗಾಗಿ ಪಾಕಿಸ್ತಾನ್ ವಿರುದ್ಧದ ಪಂದ್ಯದ ವೇಳೆ ಏನಾಗಲಿದೆ ಎಂಬುದು ಊಹಿಸುವುದು ಅಸಾಧ್ಯ. ಪರಿಸ್ಥಿತಿಯಂತೆ ನಾವು ತಯಾರಿ ಮಾಡಲಿದ್ದೇವೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.