ಮದ್ದೂರು: ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎನ್ನುವಷ್ಟು ಕಠೋರವಾದ ಜಾತ್ಯತೀತ ಸಿದ್ಧಾಂತವನ್ನು ಪಾಲಿಸಿದ್ದ ದೇವೇಗೌಡರು ಇಂದು ಬಿಜೆಪಿಯನ್ನು ಬೆಂಲಿಸುತ್ತಿದ್ದಾರೆಂದರೆ ನಮಗೆ ನೋವಾಗುತ್ತಿದೆ. ಅವರ ಇಂದಿನ ಸ್ಥಿತಿಗೆ ಮಕ್ಕಳೇ ಕಾರಣ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.
ದೇವೇಗೌಡರ ಇಂದಿನ ನಿಲುವು ಜಾತ್ಯತೀತ ತತ್ವಕ್ಕೆ ವಿರುದ್ಧವಾಗಿದೆ. ದೇವೇಗೌಡರು ನಮ್ಮ ನಾಯಕರು. ದೇಶದ ಪ್ರಧಾನಿಯಾಗಿದ್ದವರು. ಜಾತ್ಯತೀತ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಎಲ್ಲರನ್ನೂ ಅದರೆಡೆಗೆ ಕರೆತಂದಿದ್ದರು. ಜಾತ್ಯತೀತ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಹಲವು ದಶಕಗಳಿಂದ ರಾಜಕಾರಣ ಮಾಡಿದ ಎಚ್.ಡಿ.ದೇವೇಗೌಡರನ್ನು ಆ ಪಕ್ಷದ ನಾಯಕರು,
Elon Musk: UNSCನಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಇಲ್ಲದಿರುವುದು ವಿಪರ್ಯಾಸ: ಎಲಾನ್ ಮಸ್ಕ್
ಅವರ ಮಕ್ಕಳು ಈ ಪರಿಸ್ಥಿತಿಗೆ ತಂದು ನಿಲ್ಲಿಸಿದ್ದಾರೆ ಎಂದು ಛೇಡಿಸಿದರು. ನಾವೂ ರಾಮ ಭಕ್ತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಹೇಳಲಿಲ್ಲವೇ, ಬಿಜೆಪಿಯವರು ಚುನಾವಣೆಗಾಗಿ ಶ್ರೀರಾಮನನ್ನು ಬಳಸಿಕೊಳ್ಳುತ್ತಿದ್ದಾರೆ. ನಾವು ಚುನಾವಣೆ ಬಿಟ್ಟು ವೈಯಕ್ತಿಕವಾಗಿ ದೇವರ ಆರಾಧನೆ ಮಾಡುತ್ತೇವೆ. ನಮಗೂ ಭಕ್ತಿ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.