ಬೆಂಗಳೂರು:- ಚನ್ನಪಟ್ಟಣದ ಉಪಚುನಾವಣೆ ಹಿನ್ನೆಲೆ ಮೊಮ್ಮಗನ ಪರ ಆಂಬ್ಯುಲೆನ್ಸ್ನಲ್ಲಿ ದೇವೇಗೌಡರು ಪ್ರಚಾರ ಮಾಡಲಿದ್ದಾರೆ ಎಂಬ ಡಿಕೆ ಸುರೇಶ್ ಹೇಳಿಕೆಗೆ HD ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.
ಪೂಜೆ ವೇಳೆ ಬಲಗಡೆ ಹೂ.. HDKಗೆ ಶುಭ ಸೂಚನೆ ನೀಡಿದ್ರಾ ಸಿದ್ದೇಶ್ವರ ಸ್ವಾಮಿ!
ಈ ಸಂಬಂಧ ಮಾತನಾಡಿದ ಅವರು,ದೇವೇಗೌಡರ ಆರೋಗ್ಯದ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದಾರೆ. ಎಂಸಿ ಅಶ್ವತ್ಥ್ ಕೊಟ್ಟ ಹೇಳಿಕೆಯನ್ನೇ ಡಿಕೆ ಸುರೇಶ್ ಹೇಳಿದ್ದಾರೆ. ಇದೇ ಅಶ್ವತ್ಥ್ ಪರ ಹಿಂದೆ ದೇವೇಗೌಡರು ಹಳ್ಳಿ ಹಳ್ಳಿಗೆ ಪ್ರಚಾರಕ್ಕೆ ಬಂದಿರಲಿಲ್ವಾ ಆಗ ವ್ಯಾಮೋಹಕ್ಕೆ ಬಿದ್ದು ದೇವೇಗೌಡರು ಪ್ರಚಾರಕ್ಕೆ ಬಂದಿದ್ದರಾ ಎಂದು ಪ್ರಶ್ನಿಸಿದರು.
ದೇವೇಗೌಡರು ಬರುತ್ತಿರುವುದು ಮೊಮ್ಮಗನ ಪಟ್ಟಾಭಿಷೇಕಕ್ಕೆ ಎನ್ನುತ್ತಿದ್ದಾರೆ. ಅಶ್ವತ್ಥ್ ಗೆಲ್ಲಿಸಲು ಅವತ್ತು ದೇವೇಗೌಡರು ಹೋಗಿರಲಿಲ್ವಾ? ಅವತ್ತು ಯಾರಿಗೋಸ್ಕರ ದೇವೇಗೌಡರು ಹೋಗಿದ್ದರು? ಈ ರೀತಿಯ ಸಣ್ಣತನದ ಮಾತಿಗೆ ಕಾಲವೇ ಉತ್ತರ ಕೊಡುತ್ತದೆ ಎಂದರು.