ಧಾರವಾಡ: ಚೆನ್ನಮ್ಮನ ಕಿತ್ತೂರಿನ ಕಲ್ಮಠಕ್ಕೆ ಬೈಕಿನಲ್ಲಿ ಹೊರಟಿದ್ದವರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದುಕೊಂಡು ಹೋದ ಪರಿಣಾಮ ಓರ್ವ ಸಾವಿಗೀಡಾಗಿ, ಮತ್ತೋರ್ವ ಗಾಯಗೊಂಡಿರುವ ಘಟನೆ ಧಾರವಾಡದ ಹೊಯ್ಸಳನಗರದ ಸೇತುವೆ ಬಳಿ ಸಂಭವಿಸಿದೆ.
ರಾಣೆಬೆನ್ನೂರು ತಾಲೂಕಿನ ಕೆರೂರು ಗ್ರಾಮದ ಸುಲ್ತಾನಸಾಬ್ ಮೆಡೇರಿ ಎಂಬಾತ ಸ್ಥಳದಲ್ಲೇ ಸಾವಿಗೀಡಾಗಿದ್ದು, ಆತನ ಜೊತೆಗಿದ್ದ ಸಂತೋಷ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
Condoms: ಸೆಕ್ಸ್ ಎಂಜಾಯ್ ಮಾಡಲು ಕಾಂಡೋಮ್ ಆಯ್ಕೆ ಹೇಗಿರಬೇಕು ಗೊತ್ತಾ..?
ಘಟನಾ ಸ್ಥಳಕ್ಕೆ ಧಾರವಾಡ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡು ದೂರು ದಾಖಲಿಸಿಕೊಂಡಿದ್ದಾರೆ. ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದುಕೊಂಡು ಹೋಗಿದೆ ಎಂದು ತಿಳಿದು ಬಂದಿದೆ.