ಆನ್ಲೈನ್ ಗೇಮ್ ಚಟ, ಧಾರವಾಡ ಐಐಟ್ ಸ್ಟಾಫ್ ನರ್ಸ್ ನೇಣಿಗೆ ಶರಣು
ಧಾರವಾಡ: ಧಾರವಾಡ ಐಐಟಿ ಸ್ಟಾಫ್ ನರ್ಸ್ ನೇಣಿಗೆ ಶರಣಾಗಿದ್ದಾರೆ. ನಾಗರಾಜ್ ಶಿವಪ್ಪ ಉಳವಣ್ಣವರ(30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ ತಾಲೂಕಿನ ಗರಗ ಗ್ರಾಮದ ನಾಗರಾಜ್, ತಮ್ಮ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಆನ್ ಲೈನ್ ಗೇಮ್ ಚಟದಿಂದ ನೇಣಿಗೆ ಶರಣಾದ ಶಂಕೆ ವ್ಯಕ್ತವಾಗಿದೆ. ಮೃತ ನಾಗರಾಜ್ ಅನ್ ಲೈನ್ ಗೇಮ್ ನಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಕಳೆದುಕೊಂಡಿದ್ದು, ತೀವ್ರ ನಷ್ಟಕ್ಕೊಳಗಾಗಿದ್ದರು. ಈ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Copy and paste this URL into your WordPress site to embed
Copy and paste this code into your site to embed