ಧಾರವಾಡ: ಧಾರವಾಡದ ಕರ್ನಾಟಕ ಕಾಲೇಜು ರೋಸ್ಟರ್ ಪದ್ಧತಿಯನ್ನು ಗಾಳಿಗೆ ತೂರಿ ಪ್ರವೇಶಾತಿಯ ಅರ್ಹತೆಯುಳ್ಳ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ನಿರಾಕರಿಸುತ್ತಿದೆ ಎಂದು ವಿದ್ಯಾರ್ಥಿಗಳ ಪಾಲಕರು ಹಾಗೂ ಎಸ್ಎಫ್ಐ ಸಂಘಟನೆಯ ಕಾರ್ಯಕರ್ತರು ಕೆಸಿಡಿ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದರು.
ಈ ಕಾಲೇಜಿನಲ್ಲಿ ಮೀಸಲಾತಿ ಪರಿಗಣಿಸುತ್ತಿಲ್ಲ. ಅಲ್ಲದೇ ರೋಸ್ಟರ್ ಪದ್ಧತಿಯನ್ನು ಈ ಕಾಲೇಜು ಆಡಳಿತ ಮಂಡಳಿ ಸಂಪೂರ್ಣವಾಗಿ ಗಾಳಿಗೆ ತೂರಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ವಿದ್ಯಾರ್ಥಿಗಳು ಹೆಚ್ಚು ಬೇಡಿಕೆ ಇಟ್ಟಿರುವ ವಿಷಯಗಳ ಸೀಟುಗಳನ್ನು ಶೇ.75 ರಷ್ಟು ಹೆಚ್ಚಳ ಮಾಡಬೇಕು, ಆಯ್ಕೆ ಮಾಡಿದ ವಿಷಯಗಳನ್ನು ಹೊರತುಪಡಿಸಿ ವಿದ್ಯಾರ್ಥಿಗಳಿಗೆ ಸಂಬಂಧವೇ ಇರದ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಕೊಡುವುದನ್ನು ನಿಲ್ಲಿಸಬೇಕು,
Bitter Gourd: ಎಚ್ಚರ..! ಹಾಗಲಕಾಯಿ ತಿಂದ ನಂತರ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ತಿನ್ನಬೇಡಿ!
ವಿದ್ಯಾರ್ಥಿಗಳ ಪ್ರಥಮ ಹಾಗೂ ದ್ವಿತೀಯ ಸುತ್ತಿನ ಮೆರಿಟ್ ಆಧಾರಿತ ಪಟ್ಟಿಯನ್ನು ಪ್ರಕಟಿಸಬೇಕು ಹಾಗೂ ಅರ್ಜಿ ಸಲ್ಲಿಸಿದ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಆಯ್ಕೆಗೆ ಒಂದು ವಿಷಯದ ಅವಕಾಶ ಬಿಟ್ಟು ನಾಲ್ಕರಿಂದ ಐದು ವಿಷಯಗಳನ್ನು ಆಯ್ದುಕೊಳ್ಳಲು ಅವಕಾಶ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.