ಧಾರವಾಡ: ಪಂಚಾಯತಿ ನೌಕರರು ಪ್ರತಿಭಟನೆ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು. ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿ ಪಂಚಾಯತಿ ನೌಕರರು ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ದಿನ ಬಳಕೆ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ ನಮ್ಮಗೆ ಈಗ ನೀಡುತ್ತಿರುವ ವೇತನ ಸರಿ ಹೋಗುತ್ತಿಲ್ಲ. ಗ್ರಾಮ ಪಂಚಾಯತಿ ನೌಕರರು ಸಂಕಷ್ಟಕ್ಕೆ ಸಿಲುಕುವ ಸ್ಥಿತಿ ನಿರ್ಮಾಣವಾಗುತ್ತಿದೆ.
ಹಾಗಾಗಿ ಸರ್ಕಾರ ಈ ಕೂಡಲೇ ಕನಿಷ್ಠ 31 ಸಾವಿರ ರೂಪಾಯಿ ವೇತನ, ಅನಾರೋಗ್ಯ ಪೀಡಿತರಿಗೆ ಕನಿಷ್ಠ 6 ಸಾವಿರ ಪಿಂಚಣಿ ಸೇರಿ ವಿವಿಧ ಇಲಾಖೆಯ ಖಾಸಗೀಕರಣದ ಕೈ ಬೀಡಬೇಕು ಎಂದು ಅಗ್ರಹಿಸಿ. ಒಂದು ವೇಳೆ ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಒಂದನೆ ಮಾಡದಿದ್ದಲ್ಲಿ ರಾಜ್ಯ ವ್ಯಾಪಿ ಉಗ್ರ ಹೋರಾಟ ಮಾಡುವುದಾಗಿ ಇದೇವೇಳೆ ಪ್ರತಿಭಟನಾ ನಿರತರು ಎಚ್ಚರಿಕೆ ನೀಡಿದರು.