ಕಲಬುರ್ಗಿ:- PM ನರೇಂದ್ರ ಮೋದಿಯಿಂದ ದೇಶದಲ್ಲಿ ಸರ್ವಾಧಿಕಾರಿ ಧೋರಣೆ ನಡೆಯುತ್ತಿದೆ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಏನಾದರೂ ಅಧಿಕಾರಕ್ಕೆ ಬಂದರೆ ಇವೆಲ್ಲವೂ ಮೀರಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕಿಡಿಕಾರಿದ್ದಾರೆ.
ದೇಶದಲ್ಲಿ ಈಗಾಗಲೇ ಮೋದಿ ಸ್ವಾಯತ್ತತೆ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಈ ಬಾರಿ 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ. ಬೇರೆಯವರಿಗೆ ಏನೂ ಸಿಗುವುದಿಲ್ಲ. ದೇಶದ 543 ಸ್ಥಾನಗಳನ್ನು ತಾವೇ ಗೆಲ್ಲುವುದಾಗಿ ಹೇಳುತ್ತಿದ್ದು, ಒಂದು ವೇಳೆ ಹೀಗಾದರೆ ದೇಶಕ್ಕೆ ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.
ಲೋಕಸಭಾ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ (Congress) ಪಕ್ಷ ಎಲ್ಲಾ ಆಯಾಮಗಳಲ್ಲಿ ಸಿದ್ಧತೆಗಳನ್ನು ನಡೆಸಿದೆ. ದಿನಕ್ಕೊಂದು ರಾಜ್ಯದ ಪ್ರಮುಖರ ಸಭೆ ನಡೆಸಿ, ಎಲ್ಲವನ್ನೂ ಪರಾಮರ್ಶೆ ಮಾಡಲಾಗುತ್ತಿದೆ. ಆಯಾ ರಾಜ್ಯಗಳ ಸಭೆ ನಡೆಸುವುದರ ಜೊತೆಜೊತೆಗೆ ಇಂಡಿಯಾ ಒಕ್ಕೂಟದ ಜೊತೆಗೆ ನಿರಂತರವಾಗಿ ಮಾತುಕತೆ ಹಾಗೂ ದಿನದ ಬೆಳವಣಿಗೆಗಳ ಮೇಲೆ ನಿಗಾಯಿರಿಸಲು ತಂಡಗಳ ರಚನೆ ಮಾಡಲಾಗಿದೆ ಎಂದು ತಿಳಿಸಿದರು