ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್ʼನಲ್ಲಿ ಈಗಾಗಲೇ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳು ಜೈಲಿನಲ್ಲಿದ್ದಾರೆ. ಆದರೆ ನೆಚ್ಚಿನ ನಟ ಜೈಲು ಸೇರಿದ ಹಿನ್ನೆಲೆಯಲ್ಲಿ ಸೋನು ಗೌಡ ಬೇಸರ ವ್ಯಕ್ತಪಡಿಸಿದ್ದು, ಆ ಅಕೌಂಟ್ನಿಂದ ನನಗೂ ಕೆಟ್ಟದಾಗಿ ಮೆಸೇಜ್ ಬಂದಿದೆ ಅಂತಾ ಯ್ಯೂಟೂಬ್ ಚಾನೆಲ್ನಲ್ಲಿ ಬೇಸರ ಹೊರ ಹಾಕಿದ್ದಾರೆ. ಹೌದು ಈ ಬಗ್ಗೆ ಮಾತನಾಡಿದ ಸೋನು ಗೌಡ, ಯ್ಯೂಟೂಬ್ನಲ್ಲಿ ನಾನು ಒಂದು ವಿಡಿಯೋ ನೋಡಿದೆ. ಅದೇ ಅಕೌಂಟ್ನಿಂದ ಸಾಕಷ್ಟು ಹುಡುಗಿಯರಿಗೆ ಈತ ಕೆಟ್ಟದಾಗಿ ಮೆಸೇಜ್ ಮಾಡಿದ್ದ.
ಹಾಗಾಗಿ ನಾನು ನನ್ನ ಫೋನ್ನಲ್ಲಿ ಚೆಕ್ ಮಾಡಿದೆ. ಆತ ನನಗೂ ಮೆಸೇಜ್ ಮಾಡಿದ್ದಾರೆ. ಆತ ತಪ್ಪು ಮಾಡಿದ್ದಾನೆ ಅಂತ ಅವರ ಕುಟುಂಬಕ್ಕೆ ನಾನು ಏನು ಹೇಳ್ತಿಲ್ಲ. ನನಗೂ ಕೆಟ್ಟದಾಗಿ ಅನೇಕರು ಕಾಮೆಂಟ್ ಮಾಡುತ್ತಾರೆ. ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಕಾಮೆಂಟ್ ಮಾಡಿದ್ರೆ ಸುಮ್ಮನೆ ಇರ್ತೀರಾ..? ಅವರು ಕೂಡ ಒಳ್ಳೆಯವರಾಗಿ ಇದಿದ್ದರೇ ದೇವರು ಅವರನ್ನು ಚೆನ್ನಾಗಿ ಇಡುತ್ತಾರೆ ಅಂತ ಹೇಳಿದ್ದಾರೆ. ನಾನು ಧ್ವನಿ ಎತ್ತಬೇಕು ಅಂತ ಮಾತನಾಡುತ್ತಿದ್ದೇನೆ. ನನ್ನ ಬಗ್ಗೆ ನಾಳೆ ಎಲ್ಲರೂ ಮಾತನಾಡಬಹುದು, ಅದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳೋದಿಲ್ಲ.
Pavithra Gowda: ನಟಿಯಾಬೇಕೆನ್ನುವ ಕನಸು ಕಂಡಿದ್ದ ಪವಿತ್ರಾ ಗೌಡ ಲೈಫ್ ಹೇಗಿತ್ತು ಗೊತ್ತಾ..?
ತಪ್ಪು ಮಾಡದೆ ಇದ್ದವರೆಲ್ಲ ಜೈಲಿಗೆ ಬಂದಿದ್ದನ್ನು ನಾನು ನೋಡಿದ್ದೇನೆ. ಕೆಟ್ಟದ್ದು ಮಾಡಿದ್ರೆ ಕಾನೂನು ಪ್ರಕಾರ ಶಿಕ್ಷೆ ಆಗತ್ತೆ. ಅಂದು ಅಣ್ಣ, ತಮ್ಮ, ಮಗ ಅಂತ ಹೇಳೋರು ಇವತ್ತು ಬಾಸ್ ಬಗ್ಗೆ ಏನೂ ಮಾತನಾಡ್ತಿಲ್ಲ. ಏನೇ ಆಗಲಿ, ನಾವು ದರ್ಶನ್ ಪರ ನಿಂತುಕೊಳ್ಳಬೇಕು. ರೇಣುಕಾಸ್ವಾಮಿ ಕುಟುಂಬಕ್ಕೆ ಒಳ್ಳೆಯದಾಗಲಿ, ಕಾನೂನಿನ ಪ್ರಕಾರ ಅವರಿಗೆ ಏನು ಸಿಗಬೇಕೋ ಅದು ಸಿಗತ್ತೆ. ಕೆಟ್ಟದಾಗಿ ಕಾಮೆಂಟ್ ಮಾಡೋರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳೋದಿಲ್ಲ. ದರ್ಶನ್ ಅವರ ಒಳ್ಳೆಯತನವೇ ಅವರನ್ನು ಕಾಪಾಡುತ್ತೆ ಎಂದು ಸೋನು ಗೌಡ ಹೇಳಿದ್ದಾರೆ.
ಇನ್ನೂ ನಟಿ ಚಿತ್ರಾಲ್ ರಂಗಸ್ವಾಮಿ ಅವರು ಈ ಬಗ್ಗೆ ಮಾತಾಡಿದ್ದರು. ಇದೀಗ ಏನು ನಡೆಯುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ರೇಣುಕಾಸ್ವಾಮಿ ಕೊಲೆ ವಿಚಾರ ಅನೇಕರಿಗೂ ಡಿಸ್ಟರ್ಬ್ ಮಾಡಿದೆ. ಇಲ್ಲಿ ಯಾರಿಗೂ ನಾನು ಸಪೋರ್ಟ್ ಮಾಡಲು ಬಂದಿಲ್ಲ. ದೇವರು ರೇಣುಕಾಸ್ವಾಮಿ ಕುಟುಂಬಕ್ಕೆ ಶಕ್ತಿ ಕೊಡಲಿ. ಆದರೆ ರೇಣುಕಾಸ್ವಾಮಿ ಅವರು ಈ ರೀತಿ ಹಲವರಿಗೆ ಸಂದೇಶ ಕಳುಹಿಸಿದ್ದರು.ಈ ಬಗ್ಗೆ ಮಾರ್ಚ್ನಲ್ಲಿ ಪೊಲೀಸ್ ಸ್ಟೇಷನ್ನಲ್ಲಿ ಕಂಪ್ಲೇಟ್ ಕೂಡ ಆಗಿದೆ. ಗೌತಮ್ ಎನ್ನುವ ಹೆಸರಿನಲ್ಲಿ ಮಸೇಜ್ ಮಾಡಿದ್ದಾರೆ ಎಂದು ನಟಿ ಕೂಡ ಹೇಳಿದ್ದಾರೆ. ಈ ಅಕೌಂಟ್ನಿಂದ ಅದೇ ರೀತಿಯ ಕೆಟ್ಟ ಮೆಸೇಜ್ಗಳನ್ನು ಸಾಕಷ್ಟು ಜನರಿಗೆ ಕಳುಹಿಸಿದ್ದರಂತೆ. ನನಗೂ ಇದನ್ನು ಕಂಡು ಅಚ್ಚರಿ ಆಯಿತು ಎಂದು ನಟಿ ಚಿತ್ರಾಲ್ ರಂಗಸ್ವಾಮಿ ಹೇಳಿದ್ದರು.