ಗದಗ: ಹಾಸನದಲ್ಲಿ ನಡೆದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ವಿಚಾರಕ್ಕೆ ಸಂಬಂಧಿಸಿದಂತೆ ಗದಗನಲ್ಲಿ ಸಚಿವ ಎಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಸಂಬಂಧ ಹಲವು ಪ್ರಕರಣ ದಾಖಲಾಗಿದೆ. ಎಸ್ ಐ ಟಿ ತನಿಖೆ ಮುಂದುವರೆದಿದೆ. ಈ ಪ್ರಕರಣ ವಿಚಾರಣೆ ಮಾಡ್ತಿರೋ ನ್ಯಾಯಾಲಯಗಳು ಸಿವಿಲ್ ಕೋರ್ಟ ಸಂಕೀರ್ಣದಲ್ಲಿ ಕಾರ್ಯ ನಿರ್ವಹಿಸ್ತಿವೆ.
ಸಾಕ್ಷಿಗಳಿಗೆ ಬೆದರಿಕೆ ಆಮಿಷಗಳಿಗೆ ಒಳಪಡಿಸ್ತಿರೋದು ತನಿಖೆಯಲ್ಲಿ ಕಂಡು ಬಂದಿದೆ. ತನಿಖೆ ಸಂದರ್ಭದಲ್ಲಿ ನೊಂದ ಮಹಿಳೆಯರ, ಸಾಕ್ಷಿ ದಾರರ ಗೌಪ್ಯತೆ ರಕ್ಷಣೆ ಸಲುವಾಗಿ ಎರಡೂ ನ್ಯಾಯಾಲಯಗಳನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಲು ಕೋರಿದ್ದೇವೆ. ಕೋವಿಡ್ ಸಂದರ್ಭದಲ್ಲಿ ಗುರುನಾನಕ್ ಭವನದಲ್ಲಿ ನ್ಯಾಯಾಲಯ ಸ್ಥಾಪನೆ ಮಾಡಲಾಗಿತ್ತು.
ಈ ವಿಚಾರಣೆ ಬಂದ ದಿನಗಳಲ್ಲಿ ಮಾತ್ರ ಗುರುನಾನಕ್ ಭವನದಲ್ಲಿ ತಾತ್ಕಾಲಿಕವಾಗಿ ಸ್ಥಳಾಂತರಿಸೋ ಬಗ್ಗೆ ನಮ್ಮ ಇಲಾಖೆ ಅನುಮೋದನೆ ನೀಡಿದೆ. ಈ ಕುರಿತು ಹೈಕೋರ್ಟಗೆ ಪತ್ರ ರವಾನಿಸ್ತಿದ್ದೇವೆ ಎಂದು ಹೇಳಿದರು.