ಬೆಂಗಳೂರು:- ಆ. 30 ರಂದು ಆಹಾರ ಇಲಾಖೆಯು ರಾಜ್ಯದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಲು ಇಲಾಖೆ ಮುಂದಾಗಿದೆ.
ಶುಕ್ರವಾರ ಮತ್ತು ಶನಿವಾರ ಕರ್ನಾಟಕದಾದ್ಯಂತ ಹೋಟೆಲ್, ರೆಸ್ಟೋರೆಂಟ್ಗಳ ವಿರುದ್ಧ ಕಾರ್ಯಾಚರಣೆ ನಡೆಯಲಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
CM ಪಾಲಿಗೆ ಇಂದು ಮಹತ್ವದ ದಿನ: ಮುಡಾ ಕೇಸಲ್ಲಿ ತಾತ್ಕಾಲಿಕ ತಡೆ ವಿಸ್ತರಣೆ ಆಗುತ್ತಾ!?
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿನ ಮಾಂಸ, ಮೀನು, ಮೊಟ್ಟೆಗಳ ಮಾದರಿಗಳನ್ನೂ ಸಂಗ್ರಹಿಸಿ ತಪಾಸಣೆ ನಡೆಸಲಾಗುವುದು. ಅಸುರಕ್ಷಿತ ಆಹಾರ ತಯಾರಿಸುತ್ತಿರುವವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಹಣ್ಣು, ತರಕಾರಿಗಳ 385 ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, 266 ಮಾದರಿಗಳಲ್ಲಿ 239 ಸುರಕ್ಷಿತ, 27 ಅಸುರಕ್ಷಿತ ಎಂದು ಕಂಡುಬಂದಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.
ಅಸುರಕ್ಷಿತವೆಂದು ಕಂಡುಬಂದ ಮಾದರಿಗಳಲ್ಲಿ ಕ್ರಿಮಿನಾಶಕಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿದೆ. ಫಂಗಸ್ ಬೆಳವಣಿಗೆಯೂ ಪತ್ತೆಯಾಗಿದೆ. 211 ಪನ್ನೀರ್, 246 ಕೇಕ್, 67 ಕೋವಾದ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, ವಿಶ್ಲೇಷಣಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಜನರೇ ಅಹಾರದ ಗುಣಮಟ್ಟ ಪರೀಕ್ಷೆ ಮಾಡಿಕೊಳ್ಳುವ ಸಲುವಾಗಿ ಹೋಟೆಲ್, ರೆಸ್ಟೋರೆಂಟ್, ಫುಡ್ಪಾರ್ಕ್ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 3400 ಟೆಸ್ಟಿಂಗ್ ಕಿಟ್ಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಅವರು ಮಾಹತಿ ನೀಡಿದ್ದಾರೆ.