ಬೆಂಗಳೂರು:- ಡಿಕೆಶಿ ಹೇಳಿಕೆಯ ಉದ್ದೇಶವೇ ಬೇರೆ, ಸುಮ್ಮನೆ ದೊಡ್ಡದು ಮಾಡ್ತಿದ್ದಾರೆ ಎಂದು ನಟ ಸಾಧು ಕೋಕಿಲ ಹೇಳಿದ್ದಾರೆ.
ಕಲಾವಿದರಿಗೆ ಡಿಕೆಶಿ ಬೆದರಿಕೆ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಸಾಧು ಕೋಕಿಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಡಿಕೆಶಿ ಅವರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಸಿಎಂ, ಡಿಸಿಎಂ ಸಿನಿಮಾದವರನ್ನು ತಮ್ಮ ಮನೆಯವರು ಅಂದುಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ದೂರದವರಲ್ಲ, ತುಂಬಾ ಹತ್ತಿರದವರು. ಸಿನಿಮಾದವರು ಅವರಿಗೆ ಆತ್ಮೀಯರು. ಅವರು ಹೇಳಿರುವುದು ದೊಡ್ಡ ವಿಷಯ ಆಗಲ್ಲ, ದೊಡ್ಡ ವಿಷಯ ಮಾಡುತ್ತಿದ್ದಾರೆ ಅಷ್ಟೇ. ಅವರು ಹೇಳಿರುವುದರಲ್ಲಿ ಹಾಗೂ ಕೇಳಿರುವುದರಲ್ಲಿ ತಪ್ಪಿಲ್ಲ. ನೀರಿನ ವಿಚಾರದಲ್ಲಿ ಎಲ್ಲರೂ ಬರಬೇಕಿತ್ತು ಅನ್ನೋದು ಅವರ ಉದ್ದೇಶ, ಚಲನಚಿತ್ರೋತ್ಸವಕ್ಕೂ ಕೂಡ ಎಲ್ಲರೂ ಬರಲಿ ಅನ್ನೋದಷ್ಟೇ ಅವರ ಉದ್ದೇಶವಾಗಿತ್ತು ಎಂದರು.
ಇನ್ನೂ ಇದೇ ವೇಳೆ ಬೆಂಗಳೂರು ಫಿಲ್ಮ್ಫೆಸ್ಟ್ಗೆ ಕೊನೆ ಕ್ಷಣದಲ್ಲಿ ಆಹ್ವಾನ ನೀಡಿದ ಆರೋಪ ವಿಚಾರವಾಗಿ, ಕಲಾವಿದರಿಗೆ ಕೊನೆಯ ಕ್ಷಣದಲ್ಲಿ ಆಮಂತ್ರಣ ಹೋಗಿಲ್ಲ. ಚಲನಚಿತ್ರೋತ್ಸವ ಜನವರಿ 6ಕ್ಕೆ ನಿರ್ಧಾರವಾಗಿದೆ ಎಂದರು.