ದಿಟ್ಟ ಹುಡುಗಿ, ಗಟ್ಟಿ ವ್ಯಕ್ತಿತ್ವದ ಸಂಗೀತಾ ಶೃಂಗೇರಿ (Sangeetha) ಬಿಗ್ಬಾಸ್ (Bigg Boss Kannada) ಈ ಸೀಸನ್ನ ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಮನೆಯೊಳಗೆ ಕಾಣಿಸುತ್ತಿದ್ದ ಹಾಗೆಯೇ ಹೊರಗೂ ಅವರದ್ದು ನೇರ ಮಾತು, ದಿಟ್ಟ ವ್ಯಕ್ತಿತ್ವ. ಜಿಯೊಸಿನಿಮಾಗೆ ಅವರು ನೀಡಿದ ಸಂದರ್ಶನದಲ್ಲಿಯೂ ಆ ನೇರವಂತಿಕೆಯ ಕಿಡಿ ಕಾಣಿಸುತ್ತದೆ. ಅವರ ಜೊತೆಗಿನ ಸಂದರ್ಶನದ ಪೂರ್ಣಪಾಠ ಇಲ್ಲಿದೆ. ತುಂಬಾ ಅಂದ್ರೆ ತುಂಬ ಖುಷಿಯಾಗ್ತಿದೆ. ಬಿಗ್ಬಾಸ್ ಕನ್ನಡ 10ನೇ ಸೀಸನ್ ಸೆಕೆಂಡ್ ರನ್ನರ್ ಅಪ್ ನಾನು. ಇಲ್ಲಿವರೆಗೂ ನನ್ನನೋಡ್ತಾನೇ ಬಂದಿದೀರಾ… ಇನ್ಮುಂದೆ ನನ್ನ ಲೈವ್ ನೋಡಕ್ಕಾಗಲ್ಲ. ಹಾಗಾಗಿ ನನ್ನನ್ನು ನೂರ ಹನ್ನೆರಡು ದಿನಗಳವರೆಗೆ ನೇರವಾಗಿ ತೋರಿಸಿ, ಎಲ್ಲಜನರ ಜೊತೆಗೆ ಸಂಪರ್ಕದಲ್ಲಿ ಇರಿಸಿದ್ದಕ್ಕೆ ನಾನು ಜಿಯೊಸಿನಿಮಾಗೆ ಥ್ಯಾಂಕ್ಸ್ ಹೇಳಲೇಬೇಕು.
ವಿನ್ನರ್ ಆಗಕ್ಕೆ ಆಗ್ಲಿಲ್ಲಅಂತ ಬೇಜಾರಿದೆ. ಆದರೂ ನಾನು ಹ್ಯಾಪಿಯಾಗಿದ್ದೇನೆ. ಯಾಕೆಂದರೆ ಈ ಜರ್ನಿ ಎಷ್ಟು ಅದ್ಭುತವಾಗಿತ್ತು ಅಂದರೆ ನಾನು ತುಂಬ ತುಂಬ ಸ್ಟ್ರಾಂಗ್ ಆಗಿದ್ದೇನೆ. ಲೈಫ್ನಲ್ಲಿ ಸುಮಾರು ಸಮಸ್ಯೆಗಳು ಬರುತ್ತವೆ. ಓಡಿಹೋಗಬೇಕು ಅನಿಸುತ್ತದೆ. ನಾನು ಈ ಮನೆಯಲ್ಲಿ ಕಲಿತಿರುವ ಒಂದು ಸಂಗತಿ ಏನೆಂದರೆ ನೆವರ್ ಕ್ವಿಟ್; ಹ್ಯಾವ್ ಹೋಪ್! (ಬಿಟ್ಟುಕೊಡಬೇಡ; ಆಶಾವಾದಿಯಾಗಿರು). ಈ ಹೋಪ್ ಅನ್ನುವುದನ್ನು ನಾನು ಮುಂದೆಯೂ ಕ್ಯಾರಿ ಮಾಡ್ತೀನಿ. ಈ ಮನೆಯಲ್ಲಿ ಸಾಕಷ್ಟು ಕಲಿತಿದ್ದೀನಿ. ಬದುಕಿನಲ್ಲಿಯೂ ಸಾಕಷ್ಟು ಕಲಿಯುವುದಿದೆ. ನಾನು ಯಾವತ್ತೂ ಸಮಸ್ಯೆಗಳಿಂದ ಓಡಿಹೋಗುವುದಿಲ್ಲ. ಧೈರ್ಯದಿಂದ ಎದುರಿಸುತ್ತೇನೆ.
ಮನೆಯೊಳಗೆ ಎಲ್ಲರೂ ಅವರವರ ಗೇಮ್ ಅನ್ನು ಜೆನ್ಯೂನ್ ಆಗಿಯೇ ಆಡಿದ್ದೇನೆ. ಅದರಲ್ಲಿ ಯಾವ ಅನುಮಾನವೂ ಇಲ್ಲ. ನಾನು ನನ್ನ ಗೇಮ್ ಅನ್ನು ಗೇಮ್ ಅಂತಷ್ಟೇ ಆಡಿಲ್ಲ, ಅದನ್ನು ಬದುಕಿದ್ದೀನಿ. ಬೇರೆಯವರ ಬಗ್ಗೆ ನಾನು ಕಮೆಂಟ್ ಮಾಡಲಿಕ್ಕೆ ಆಗುವುದಿಲ್ಲ. ನನ್ನ ಗೇಮ್ ಬಗ್ಗೆಯಷ್ಟೇ ನಾನು ಹೇಳಬಹುದು. ಯಾಕೆಂದರೆ ಅಲ್ಲಿ ಉಳಿದುಕೊಳ್ಳಬೇಕು ಅಂದರೆ ಎಲ್ಲರೂ ಅವರವರ ವ್ಯಕ್ತಿತ್ವವನ್ನು ತೋರಿಸಿಕೊಳ್ಳಬೇಕಾಗುತ್ತದೆ. ಯಾರಾದರೂ ಫೇಕ್ ಆಗಿರಲು ಸಾಧ್ಯ ಎಂದು ನನಗೆ ಅನಿಸುತ್ತಿಲ್ಲ. ಅದರಲ್ಲಿಯೂ ಓಪನ್ ನಾಮಿನೇಷನ್ ಎಂದು ಬಿಗ್ಬಾಸ್ ಮಾಡಿದ್ದು ತುಂಬ ಒಳ್ಳೆಯದು. ಈ ಸೀಸನ್ನಲ್ಲಿ ಯಾವಾಗಲೂ ಕನ್ಫೆಷನ್ ರೂಮಿಗೆ ಹೋಗಿ ಗೊತ್ತಾಗದೆ ಇರುವ ಹಾಗೆ ನಾಮಿನೇಷನ್ ನಡೆಯಲೇ ಇಲ್ಲ.