ಬೆಂಗಳೂರು:– ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, KSRTC ತಾಂತ್ರಿಕ ಸಹಾಯಕ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡಿ ಹಾರೈಸಿದ್ದಾರೆ
ಇದೇ ವೇಳೆ ಮಾತಾನಾಡಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ನೇಮಕಾತಿಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಿ, ಅಭ್ಯರ್ಥಿಗಳಿಗೆ ಅವರಿಚ್ಚೆಯಂತೆಯೆ ಘಟಕಗಳನ್ನು ಸಹ ಆರಿಸಿಕೊಳ್ಳಲು ಗಣಕೀಕರಣದ ಮೂಲಕ ಅವಕಾಶ ಕಲ್ಪಿಸಲಾಗಿದೆ. ನೇಮಕಗೊಂಡಿರುವ ಸಿಬ್ಬಂದಿಗಳು ಶ್ರಮವಹಿಸಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ನಿಗಮಕ್ಕೆ ಕೀರ್ತಿ ತರುವಂತೆ ತಿಳಿಸಿದರು.
ಕೋವಿಡ್ ನಿಂದಾಗಿ ಯಾವುದೇ ರೆಕ್ಯುಪ್ಮೆಂಟ್ ಆಗಿರಲಿಲ್ಲ. ಈ ವರ್ಷ ಹೊಸದಾಗಿ ರೆಕ್ಯುಪ್ಮೆಂಟ್ ಮಾಡಿಕೊಳ್ಳುತ್ತಿದ್ದೇವೆ. ಕೋವಿಡ್ ಕಾರಣದಿಂದಾಗಿ 726 ತಾಂತ್ರಿಕ ಸಹಾಯಕ ಹುದ್ದೆಗಳಿಗೆ, 8 ವರ್ಷಗಳ ನಂತರ ಅನುಮತಿ ಸಿಕ್ಕಿದೆ. ಈ ವರ್ಷ ರೆಕ್ಯುಪ್ಮೆಂಟ್ ಪಾರದರ್ಶಕವಾಗಿ ಮಾಡಲಾಗಿದೆ. 300 ಪೊಸ್ಟ್ ಗಳಿಗೆ ಅಭ್ಯರ್ಥಿಗಳನ್ನ ಭರ್ತಿಮಾಡಲು ಸರ್ಕಾರ ಸೂಚನೆ ನೀಡಿತ್ತು. ಅದ್ರಲ್ಲಿ ಸಧ್ಯ 262 ಅಭ್ಯರ್ಥಿಗಳನ್ನ ನೇಮಕ ಮಾಡಿಕೊಂಡಿದ್ದು,ಇವರಲ್ಲಿ 36 ಜನರನ್ನ ವೆಯಿಟಿಂಗ್ ಲೀಸ್ಟ್ ನಲ್ಲಿ ಇರಿಸಲಾಗಿದೆ. ಅಭ್ಯರ್ಥಿಗಳಿಗೆ ಅಧಿಸೂಚನೆಯ ಸಂಧರ್ಭದಲ್ಲಿ ನಿಗಧಿಪಡಿಸಲಾಗಿದ್ದ, ಎರಡು ವರ್ಷಗಳ ತರಭೇತಿ ಅವಧಿಯನ್ನ 1 ವರ್ಷಕ್ಕೆ ಇಳಿಕೆ ಮಾಡಲಾಗಿದೆ. ತರಭೇತಿ ಭತ್ಯೆಯನ್ನ 9 ಸಾವಿರದಿಂದ 14 ಸಾವಿರಕ್ಕೆ ಏರಿಕೆ ಮಾಡಲಾಗಿದೆ. ಎಲ್ಲರೂ ಚೆನ್ನಾಗಿ ಕೆಲಸ ಮಾಡಿ ಅಂತ ಶುಭ ಹಾರೈಸಿದದ್ರು.