ಮಂಡ್ಯ :- ಶ್ರೀರಂಗಪಟ್ಟಣ ಪಾರಂಪರಿಕ ದಸರಾ ಉತ್ಸವಕ್ಕೆ ಚಾಲನೆ ನೀಡಲು ಆಗಮಿಸುವಂತೆ ಚಲನಚಿತ್ರ ನಟ ಡಾ. ಶಿವರಾಜ್ ಕುಮಾರ್ ಅವರಿಗೆ ಶಾಸಕ ರಮೇಶ್ ಬಂಡಿ ಸಿದ್ದೇಗೌಡ ಅವರ ನೇತೃತ್ವದಲ್ಲಿ ಜಿಲ್ಲಾಡಳಿತ ಆಹ್ವಾನ ನೀಡಿತು.ಬೆಂಗಳೂರಿನಲ್ಲಿರುವ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಸೋಮವಾರ ತೆರಳಿದ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ,
Cook With Coconut Oil: ತಲೆಗೆ ಮಾತ್ರವಲ್ಲ, ಅಡುಗೆಗೆ ತೆಂಗಿನೆಣ್ಣೆ ಬಳಸುವುದು ಆರೋಗ್ಯಕ್ಕೆ ಒಳ್ಳೆಯದು
ಸಿಇಓ ಶೇಖ್ ತನ್ವೀರ್ ಆಸೀಫ್ ಶಾಸಕರ ಜೊತೆಗೂಡಿ ಆಮಂತ್ರಣ ನೀಡಿ ಸನ್ಮಾನಿಸಿದರು. ಇದೇ ವೇಳೆ ಮಾತನಾಡಿದ ಶಿವರಾಜ್ ಕುಮಾರ್ ದಸರಾ ಉದ್ಘಾಟನೆಗೆ ನನ್ನನ್ನು ಆಯ್ಕೆ ಮಾಡಿರುವುದು ಇದು ಅತ್ಯಂತ ಹರ್ಷದ ಸಂಗತಿಯಾಗಿದ್ದು, ಹೀಗಾಗಿ ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.
ವರದಿ : ಗಿರೀಶ್ ರಾಜ್ ಮಂಡ್ಯ