‘4 ವರ್ಷಗಳ ಜೊತೆ ಪಯಣಕ್ಕೆ ಅಂತ್ಯ ಹಾಡಿದ್ದೇವೆ ಎಂದು ಹೇಳುವ ಮೂಲಕ ಹಾರ್ದಿಕ್ ಪಾಂಡ್ಯ ಅವರು ವಿಚ್ಛೇದನ ಖಚಿತ ಪಡಿಸಿದ್ದಾರೆ.
ತುಮಕೂರು: ಬೀದಿನಾಯಿಗಳ ಹಾವಳಿ; ನಿಯಂತ್ರಣಕ್ಕೆ ಪಾಲಿಕೆ ತಂತು ನೂತನ ಪ್ಲ್ಯಾನ್!
ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಸ್ತೃತವಾಗಿ ಬರೆದುಕೊಂಡಿರುವ ಹಾರ್ದಿಕ್ ಪಾಂಡ್ಯ, ಕಳೆದ ನಾಲ್ಕು ವರ್ಷಗಳಿಂದ ನತಾಶ್ ಹಾಗಾ ನಾನು ಜೊತೆಯಾಗಿ ಹೆಜ್ಜೆ ಹಾಕಿದ್ದೇವು. ಆದರೆ ಇದೀಗ ಹಲವು ಕಾರಣಗಳಿಂದ ನಾವಿಬ್ಬರು ಪರಸ್ಪರ ಒಪ್ಪಿಗೆಯಿಂದ ದೂರ ಸರಿಯುತ್ತಿದ್ದೇವೆ. ನಾವು ಜೊತೆಯಾಗಿರವು ಹಲವು ಪ್ರಯತ್ನ ನಡೆಸಿದ್ದೇವೆ. ಇದೀಗ ಇಬ್ಬರ ಉತ್ತಮ ಭವಿಷ್ಯಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಡಿವೋರ್ಸ್ ನಮಗೆ ಸುಲಭದ ನಿರ್ಧಾರವಾಗಿರಲಿಲ್ಲ. ಜೊತೆಯಾಗಿ ನಾವು ಹಲವು ಸಂತಸದ ಕ್ಷಣಗಳನ್ನು ಕಳೆದಿದ್ದೇವೆ. ಪರಸ್ಪರ ಗೌರವಿಂದ ಕಂಡಿದ್ದೇವೆ. ಉತ್ತಮ ಸಂಗಾತಿಯಾಗಿ ಮುನ್ನಡೆದಿದ್ದೇವೆ. ಒಂದು ಕುಟುಂಬವಾಗಿ ನಾವು ಹೆಜ್ಜೆ ಹಾಕಿದ್ದೇವೆ. ನಮ್ಮಿಬ್ಬರಿಗೆ ಮಗ ಅಗಸ್ತ್ಯನಿದ್ದಾನೆ. ಆಗಸ್ತ್ಯ ನಮ್ಮಿಬ್ಬರ ಪ್ರಮುಖ ಕೇಂದ್ರಬಿಂದುವಾಗಿ ಮುಂದುವರಿಯುತ್ತಾನೆ. ಆತನಿಗೆ ನಾವಿಬ್ಬರು ಪೋಷಕರಾಗಿದ್ದೇವೆ. ಆತನ ಜವಾಬ್ದಾರಿ ನಮ್ಮಿಬ್ಬರಿಗೂ ಇದೆ. ಆತನ ಖುಷಿ, ಸಂತೋಷಕ್ಕೆ ನಾವು ಎಲ್ಲವನ್ನೂ ಮಾಡುತ್ತೇವೆ. ಈ ಸಂದರ್ಭದಲ್ಲಿ ನಾವು ಎಲ್ಲರಲ್ಲಿ ಕಳಕಳಿಯ ಮನವಿ ಮಾಡುತ್ತೇವೆ. ನಮ್ಮ ಖಾಸಗಿ ಕ್ಷಣಗಳಿಗೆ ಗೌರವ ನೀಡಿ. ಈ ಕಠಿಣ ಸಂದರ್ಭದಲ್ಲಿ ನಮ್ಮನ್ನು ಅರ್ಥ ಮಾಡಿಕೊಂಡು ನಮ್ಮ ಬೆಂಬಲಕ್ಕೆ ನಿಲ್ಲುತ್ತೀರಿ ಎಂದು ಭಾವಿಸುತ್ತೇನೆ ಎಂದು ಹಾರ್ದಿಕ್ ಪಾಂಡ್ಯ ಪೋಸ್ಟ್ ಮಾಡಿದ್ದಾರೆ.
ಹಲವು ದಿನಗಳಿಂದ ಕೇಳಿಬರುತ್ತಿದ್ದ ಸುದ್ದಿಗೆ ಅಂತಿಮ ಮುದ್ರೆ ಒತ್ತಿದ್ದಾರೆ. ವಾಸ್ತವವಾಗಿ 2024 ರ ಐಪಿಎಲ್ ಆರಂಭವಾದಾಗಿನಿಂದಲೂ ಈ ಇಬ್ಬರು ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಟಿ20 ವಿಶ್ವಕಪ್ ವೇಳೆಯೂ ನತಾಶಾ ಸುಳಿವಿರಲಿಲ್ಲ. ಇದೆಲ್ಲದರ ಜೊತೆಗೆ ಅನಂತ್ ಅಂಬಾನಿ ಮದುವೆಯಲ್ಲೂ ಹಾರ್ದಿಕ್ ಏಕಾಂಗಿಯಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ ಈ ಇಬ್ಬರ ವೈಯಕ್ತಿಕ ಬದುಕಿನಲ್ಲಿ ಬಿರುಗಾಳಿ ಎದ್ದಿರುವ ಸುದ್ದಿಗೆ ಪುಷ್ಠಿ ಸಿಕ್ಕಿತ್ತು. ಇದೀಗ ಆ ವದಂತಿಗೆ ಅಂತ್ಯ ಹಾಡುವ ಕೆಲಸವನ್ನು ಹಾರ್ದಿಕ್ ಪಾಂಡ್ಯ ಮಾಡಿದ್ದಾರೆ.
ಈ ಮೂಲಕ ಇಷ್ಟು ದಿನ ಸೋಷಿಯಲ್ ಮೀಡಿಯಾದಲ್ಲಿ ಹಬ್ಬಿದ್ದ ವನಂತಿಗೆ ತೆರೆ ಬಿದ್ದಂತಾಗಿದೆ.