ಚಿಕ್ಕಮಗಳೂರು: ರಾಜ್ಯದಲ್ಲಿ ನಿನ್ನೆ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ ಮುಗಿದ ಹಿನ್ನೆಲೆ ಡಿಕೆ ಬ್ರದರ್ಸ್ ರಿಲ್ಯಾಕ್ಸ್ ಮೂಡ್ಗೆ ಜಾರಿದ್ದಾರೆ. ತಮ್ಮ ಮೇಲಿನ ಆರೋಪ, ಚುನಾವಣೆ ದಣಿವು ನೀಗಿಸಿಕೊಳ್ಳಲು ಚಿಕ್ಕಮಗಳೂರು ತಾಲೂಕಿನ ಮೂಕ್ತಿಹಳ್ಳಿ ಗ್ರಾಮದ ಬಳಿ ಇರುವ, ತಮ್ಮ ಅಳಿಯನ ಒಡೆತನದ ಸೆರಾಯ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ರೆಸಾರ್ಟ್ಗೆ ಆಗಮಿಸಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ರೈತರೇ ಗಮನಿಸಿ.. ಸಪೋಟ ಹಣ್ಣಿನ ಕೃಷಿಯಿಂದ ಗಳಿಸಬಹುದು ಲಕ್ಷಗಟ್ಟಲೇ ಆದಾಯ..!
ಇನ್ನು ಸೆರಾಯ್ ರೆಸಾರ್ಟ್ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರೆಸಾರ್ಟ್ ನೊಳಗೆ ಮಾಧ್ಯಮಕ್ಕೆ ನಿರ್ಬಂಧ ಹೇರಲಾಗಿದೆ. ನಿನ್ನೆ ಸಂಜೆಯೇ ಡಿಸಿಎಂ ಡಿಕೆ ಶಿವಕುಮಾರ್, ಡಿಕೆ ಸುರೇಶ್ ರೆಸಾರ್ಟ್ಗೆ ಆಗಮಿಸಿದ್ದು ಡಿಸಿಎಂ ಡಿಕೆಗೆ ಕುಣಿಗಲ್ ಶಾಸಕ ರಂಗನಾಥ್, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸಾಥ್ ನೀಡಿದ್ದಾರೆ.