ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ವಿರೋಧ ಪಕ್ಷಗಳಿಗೆ ಮತದಾರರ ಒಲವು ಗಳಿಸಲು ಯಾವುದೇ ವಿಷಯವಿರದ ಕಾರಣ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. ಜನ ಕಾಂಗ್ರೆಸ್ ಪಕ್ಷವನ್ನು ಅರಿಸಿ ಶಕ್ತಿ ನೀಡಿದ್ದಾರೆ ಮತ್ತು ತಮ್ಮ ಸರ್ಕಾರ ಅವರಲ್ಲಿ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದೆ ಎಂದು ಶಿವಕುಮಾರ್ ಹೇಳಿದರು.
PUC ಮತ್ತು SSLC ಪಾಸಾದವರಿಗೆ ನವೋದಯ ವಿದ್ಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
. ನಿನ್ನೆ ಸಿದ್ದರಾಮಯ್ಯ ಅವರ ಱಲಿಯಲ್ಲಿ ವ್ಯಕ್ತಿಯೊಬ್ಬ ಗನ್ ಇಟ್ಟುಕೊಂಡು ಸಿಎಂ ಇದ್ದ ವಾಹನ ಹತ್ತಿದ್ದ ವಿಷಯ ಡಿಸಿಎಂಗೆ ಗೊತ್ತೇ ಇರಲಿಲ್ಲ. ಕುಮಾರಸ್ವಾಮಿಯರು ಕೇಂದ್ರದಲ್ಲಿ ಕೃಷಿ ಸಚಿವನಾಗುವ ಬಗ್ಗೆ ಹೇಳಿರುವುದನ್ನು ಗೇಲಿ ಮಾಡಿದ ಶಿವಕುಮಾರ್ ಕನಸು ಕಾಣುವುದರಲ್ಲಿ ತಪ್ಪಿಲ್ಲ ಅದರೆ, ಎನ್ ಡಿಎ ಅಧಿಕಾರಕ್ಕೆ ಬಂದರೆ ತಾನೆ ಅವರ ಕನಸು ನನಸಾಗೋದು ಎಂದರು. ರಾಜ್ಯದಲ್ಲಿ ಎರಡು ದಿನಗಳ ಮಟ್ಟಿಗೆ ಚುನಾವಣಾ ಪ್ರಚಾರಕ್ಕೆ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಬರಲಿದ್ದಾರೆ ಎಂದು ಶಿವಕುಮಾರ್ ಹೇಳಿದರು.