ಹುಬ್ಬಳ್ಳಿ; ಲೋಕಸಭಾ ಚುನಾವಣೆ ಹಿನ್ನಲೆ ಧಾರವಾಡ ಜಿಲ್ಲೆಯ ಕುಂದಗೋಳಕ್ಕೆ ಹೆಲಿಕ್ಯಾಪ್ಟರ್ ಮೂಲಕ ಡಿಕೆ ಶಿವಕುಮಾರ್ ಎಂಟ್ರಿಕೊಟ್ಟಿದ್ದು ಕೈ ಅಭ್ಯರ್ಥಿ ವಿನೋದ್ ಅಸೂಟಿ ಪರ ಡಿಕೆ ಶಿವಕುಮಾರ್ ಮತಯಾಚನೆ ಮಾಡಿದರು.
IPL 2024: ಆರ್ಸಿಬಿ ವಿರುದ್ಧ ಬೇಡದ ದಾಖಲೆ ಬರೆದ ಗುಜರಾತ್ ಟೈಟನ್ಸ್!
ಇನ್ನು ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ಗೆ ಕೈ ಕಾರ್ಯಕರ್ತರು ಬೃಹತ್ ಸೇಬಿನ ಹಾರ ಹಾಕಿ ಹೂ ಮಳೆಗರೆದು ಭರ್ಜರಿ ಸ್ವಾಗತ ಮಾಡಿದರು. ಈ ವೇಳೆ ಡಿಸಿಎಂಗೆ ಮಾಜಿ ಶಾಸಕ ಡಾ.ಯತೀಂದ್ರ, ಕೈ ಅಭ್ಯರ್ಥಿ ವಿನೋದ್ ಅಸೂಟಿ, ಹಾಸ್ಯ ಕಲಾವಿದ ಸಾಧು ಕೋಕಿಲಾ ಸಾಥ್ ನೀಡಿದ್ದಾರೆ. ಇನ್ನು ಸೇಬಿನ ಹಾರ ಹಾಕಿದ ಕೆಲವೇ ಕ್ಷಣಗಳಲ್ಲಿ ಸೇರಿದ್ದ ಜನರು ಉಡೀಸ್ ಮಾಡಿದ್ದಾರೆ. ಇದು ಕುಂದಗೋಳ ಪಟ್ಟಣದಲ್ಲಿ ನಡೆದ ಬೃಹತ್ ಪ್ರಚಾರ ಸಭೆಯಲ್ಲಿ ಘಟನೆ ಆಗಿದೆ