ಉಡುಪಿ:- ಡಿಕೆ ಬೆಂಬಲಿಗರು ಸುಮ್ಮನಿರಿ, ಶಿವಕುಮಾರ್ ಸಿಎಂ ಆಗೋದು ನಿಶ್ಚಿತ ಎಂದು ವೀರಪ್ಪ ಮೊಯ್ಲಿ ಹೇಳಿಕೆ ಕೊಟ್ಟಿದ್ದಾರೆ.
‘ದೇವರು ಕೊಟ್ಟರೂ ಪೂಜಾರಿ ಕೊಡನು’ ಎಂಬಂಥ ಸ್ಥಿತಿ ರಾಜ್ಯದಲ್ಲಿ: ಪ್ರಲ್ಹಾದ ಜೋಶಿ!
ಕಾರ್ಕಳದಲ್ಲಿ ಆಯೋಜನೆಗೊಂಡಿದ್ದ ಕಾಂಗ್ರೆಸ್ ಕುಟುಂಬೋತ್ಸವ ಸಮಾವೇಶ ಉದ್ದೇಶಿಸಿ ಡಿಕೆಶಿ ಸಮ್ಮುಖದಲ್ಲೇ ಈ ಮಾತನ್ನು ನುಡಿದಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಡಿಕೆಶಿ ಮುಖ್ಯಮಂತ್ರಿ ಆಗುವುದು ಸೆಟಲ್ಡ್ ಮ್ಯಾಟರ್ ಎಂದರು.
ಡಿಕೆ ಬೆಂಬಲಿಗರು ಮಾತನಾಡದೇ ಸುಮ್ಮನಿರಬೇಕು. ಡಿಕೆಶಿ ಮುಖ್ಯಮಂತ್ರಿಯಾಗುವುದು ಜನರ ಮನಸ್ಸಿನಲ್ಲಿ ತೀರ್ಮಾನವಾಗಿದೆ. ಇತಿಹಾಸ ತೀರ್ಮಾನ ಮಾಡಿದೆ. ಮ್ಯಾಟರ್ ಆಫ್ ಟೈಮ್ ಅಷ್ಟೇ ಎಂದು ತಿಳಿಸಿದರು.
ಶಿವಕುಮಾರ್ಗೆ ಪ್ರಥಮ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದವನು ನಾನು. ಇಂದು ಯಶಸ್ವಿ ನಾಯಕರಾಗಿ ಕರ್ನಾಟಕದಲ್ಲಿ ಮೂಡಿ ಬಂದಿದ್ದಾರೆ. ಡಿಕೆಶಿ ಸದ್ಯದಲ್ಲೇ ಮುಖ್ಯಮಂತ್ರಿ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು