ಬೆಂಗಳೂರು: ಡಿಕೆಶಿ ಹಾಗೂ ಡಿ.ಕೆ ಸುರೇಶ್ ಸೇರಿ ನನ್ನ ಮೇಲೆ ರೇಪ್ ಕೇಸ್ ಹಾಕಿಸಿದ್ದರು ಎಂದು ಶಾಸಕ ಮುನಿರತ್ನ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪೊಲೀಸ್ ಕಮೀಷನರ್ಗೆ ಹೇಳಿ ಡಿಸಿಎಂ ಡಿ.ಕೆ.ಶಿವಕುಮಾರ್ ನನ್ನ ಮೇಲೆ ರೇಪ್ ಕೇಸ್ ಹಾಕಿಸಿದ್ದರು.
ಅಟ್ರಾಸಿಟಿ ಕೇಸಲ್ಲಿ ಕೋರ್ಟ್ಗೆ ಹೋಗಿದ್ದಾಗ ರಾಜೀನಾಮೆ ಕೊಟ್ಟರೆ ರೇಪ್ ಕೇಸ್ ಹಾಕಲ್ಲ ಎಂದು ಡಿವೈಎಸ್ಪಿ ಧರ್ಮೇಂದ್ರ ನೇರವಾಗಿ ಈ ಮಾತನ್ನು ಹೇಳಿದ್ದಾರೆ. ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ಸೇರಿ ನನ್ನ ಮೇಲೆ ಸಿಬಿಐ ತನಿಖೆ ಮಾಡಿಸಿ ರೇಪ್ ಕೇಸ್ ಹಾಕಿಸಿದ್ದರು ಎಂದು ಆರೋಪಿಸಿದ್ದಾರೆ.
Hyperloop: 30 ನಿಮಿಷಗಳಲ್ಲಿ 300 ಕಿ.ಮೀ ಪ್ರಯಾಣ! ಬುಲೆಟ್ ರೈಲಿಗಿಂದ ಸ್ಪೀಡ್ ಆಗಿ ಚಲಿಸಲಿದೆ ಈ ಟ್ರೈನ್
ನನಗೆ ಮೊಟ್ಟೆ ಹೊಡೆಯಲು, ಮಸಿ ಬಳಿಯಲು ಹೀಗೆ ಎಲ್ಲದಕ್ಕೂ ರೇಟ್ ಫಿಕ್ಸ್ ಮಾಡಿದ್ದಾರೆ. ಲೋಕಸಭೆ ಚುನಾವಣೆ ಮುಗಿದ ನಂತರ ಈ ರೀತಿ ಟಾರ್ಗೆಟ್ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ, ರೇವಣ್ಣ, ಸೂರಜ್ ರೇವಣ್ಣ ಎಲ್ಲಾ ಆಯ್ತು ಈಗ ರಾಜಣ್ಣ ಮೇಲೆ ಡಿಕೆಶಿ ಆರೋಪ ಮಾಡುತ್ತಿದ್ದಾರೆ.
ಡಿಕೆಶಿ ಮಹಾ ಪಾಪದ ಕೆಲಸ ಮಾಡಿದ್ದಾರೆ. ನೀವು ಮಾಡಿದ ಪಾಪ ನಿಮ್ಮನ್ನ ಬಿಡಲ್ಲ. ನಿಮ್ಮ ಕುಟುಂಬ ಬೆಳೆಯಬೇಕು, ನೀವು ಇನ್ನೂ ಮುಂದೆ ಇಂತಹ ನೀಚ ಕೆಲಸ ಮಾಡಬಾರದು. ನಾನು ರೇಪ್ ಮಾಡಿದ್ದರೆ ಸರ್ವನಾಶ ಆಗುತ್ತೇನೆ, ನಾನು ಹುಳ ಬಿದ್ದು ಸಾಯಬೇಕು. ಇಲ್ಲ ಅಂದರೆ ನೀವು ಹುಳ ಬಿದ್ದು ಸಾಯುತ್ತೀರಾ ಎಂದು ಕಿಡಿಕಾರಿದರು.