ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಪೆನ್ಡ್ರೈವ್ ಪ್ರಕರಣದಲ್ಲಿ ಷಡ್ಯಂತ್ರ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಕೀಲ ದೇವರಾಜೇಗೌಡ ನೇರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತಾಧಿಕಾರಿಗಳ ಸಭೆಯನ್ನ ಗೌಪ್ಯವಾಗಿ ಕರೆದಿದ್ದಾರೆ.
ಪ್ರಜ್ವಲ್ ರೇವಣ್ಣ ಕೇಸಲ್ಲಿ ಯಾರನ್ನ ಆರೋಪಿಗಳಾಗಿ ಮಾಡಬೇಕು, ಬಿಡಬೇಕು ಅಂತ ಚರ್ಚೆಯಾಗಿದೆ. ನನ್ನ ಜೀವನದ ಹೋರಾಟ ಇದ್ದದ್ದು ಎಚ್.ಡಿ ರೇವಣ್ಣ ವಿರುದ್ಧ ಆಗಿತ್ತು. ನನ್ನ ಹೋರಾಟದ ಪ್ರತಿಫಲ ನಿಜವಾದ ನ್ಯಾಯ ಸಿಕ್ಕಿದೆ ಅನ್ಕೊಂಡಿದ್ದೆ. ಇದನ್ನೇ ಅಸ್ತ್ರವಾಗಿ ಇಟ್ಕೊಂಡು ಕೆಲ ಕಿಡಿಗೇಡಿ ರಾಜಕಾರಣಿಗಳು ಅಸ್ತ್ರವಾಗಿ ಇಟ್ಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬಿಸಿಲ ಉರಿಗೆ ಬೆಂದ ಜನರು.! ಬಿಸಿಲ ಬೇಗೆಯಿಂದ ಪಾರಾಗಲು ಹೀಗೆ ಮಾಡಿ ಸಾಕು..
ಎಸ್ ಐಟಿ (SIT) ಮುಖ್ಯಸ್ಥರು ಹಾಗೂ ತನಿಖಾಧಿಕಾರಿಗಳನ್ನ 2 ಬಾರಿ ಭೇಟಿಯಾಗಿದ್ದೀನಿ. ಸಾಕ್ಷಿಯನ್ನಾಗಿ ನನ್ನ ಹೇಳಿಕೆ ಪಡೆದಿದ್ದಾರೆ. ಕೆಲವು ಕಹಿ ಸತ್ಯ ಹೇಳಬೇಕಿದೆ. ತಡೆಯಾಜ್ಞೆ ಇದ್ರೂ ಸಹ ಅಶ್ಲೀಲ ವೀಡಿಯೋ ಪೆನ್ ಡ್ರೈವ್ ಹಂಚಿರುವ ಬಗ್ಗೆ ಹಾಸನದಲ್ಲಿ ಎಫ್ ಐಆರ್ ಆಗಿದೆ. ಅಶ್ಲೀಲ ವೀಡಿಯೋ ಆಗಿದ್ರೂ ಹೆಣ್ಣು ಮಕ್ಕಳ ಮುಖವನ್ನು ಮರೆ ಮಾಚಿಲ್ಲ ಎಂದು ಹೇಳಿದರು.
ಕಾರ್ತಿಕ್ ನನ್ನ ಕಚೇರಿಗೆ ಬಂದು ನನ್ನ ಕೈಗೆ ಈ ಕಾಪಿ ಕೊಡುತ್ತಾನೆ. ಇದರ ಜೊತೆಗೆ ಒಂದು ಪೆನ್ ಡ್ರೈವ್ ಕೊಡ್ತಾನೆ. 88ನೇ ಪ್ರತಿವಾದಿಯಾಗಿ ಇದರಲ್ಲಿ ಕಾರ್ತಿಕ್ ಇದ್ದಾನೆ. ನಾನು ವಿಚಾರಣೆಗೆ ಹೋದಾಗ ನನ್ನ ಹೇಳಿಕೆ ಪಡೆದಿದ್ದಾರೆ, ದಾಖಲೆ ಕೊಟ್ಟಿದ್ದೇನೆ. ನಾನು ಹೇಳಿಕೆಯಲ್ಲಿ ಬಹಳ ಪ್ರಮುಖ ಅಂಶವನ್ನ ಉಲ್ಲೇಖ ಮಾಡಿದ್ದೇನೆ. ಕಾರ್ತಿಕ್ ನನ್ನ ಮನೆಗೆ ಬಂದಿರುವ ವೀಡಿಯೋ ಇದು ಎಂದು ಹೇಳುತ್ತಾ ದೇವರಾಜೇಗೌಡ ಅವರು ತಮ್ಮ ಲ್ಯಾಪ್ ಟಾಪ್ ನಲ್ಲಿ ಕಾರ್ತಿಕ್ ಮನೆಗೆ ಬಂದಿರುವ ವೀಡಿಯೊ ಪ್ರದರ್ಶಿಸಿದರು.