ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇದೀಗ ಡಿಕೆ ಬ್ರದರ್ಸ್ ವಿರುದ್ಧ ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್’ಡ್ರೈವ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್ ಕೈವಾಡ ಇದೆ. ರೇವಣ್ಣ ಮನೆಯಲ್ಲಿ ಕೆಲಸಕ್ಕೆ ಇದ್ದ ಕಾರ್ತಿಕನೇ ಇದರ ಮೂಲ.
ಹಾಸನದ ಕಾಂಗ್ರೆಸ್ ಅಭ್ಯರ್ಥಿ ಹೊಳೆನರಸೀಪುರದಲ್ಲಿ ಒಬ್ಬ ವ್ಯಕ್ತಿಯನ್ನು ಹಿಡಿದುಕೊಂಡು. ಡಿ.ಕೆ.ಸುರೇಶ್, ಡಿಕೆ ಶಿವಕುಮಾರ್ ಬಳಿ ಹೋಗಿದ್ದಾನೆ. ಡಿಕೆಶಿ ಮನೆಯಲ್ಲಿ ಪೆನ್’ಡ್ರೈವ್’ನ ಟ್ರಾನ್ಸ್ ಫರ್ ಮಾಡಿಕೊಂಡಿ ದ್ದಾನೆ. ಸಮಯ ಬಂದಾಗ ಉಪಯೋಗ ಮಾಡಿಕೊಳ್ಳೋಣ ಅಂತ ಕಳಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
![Demo](https://ainlivenews.com/wp-content/uploads/2023/12/spoorthi-1.jpg)
Black radish: ಕಪ್ಪು ಮೂಲಂಗಿ ಬೆಳೆಯುವುದು ಹೇಗೆ..? ಇದರ ಉಪಯೋಗವೇನು..?
ದೇವರಾಜೇಗೌಡ, ಶಿವರಾಮೇಗೌಡ, ಡಿಕೆ ಶಿವಕುಮಾರ್ ಪೆನ್ ಡ್ರೈವ್ ವಿತರಣೆ ಹಿಂದೆ ಇದ್ದಾರೆ. ಅರ್ಧ ನಿಮಿಷದಲ್ಲೆ ಎಲ್ಲವೂ ತೀರ್ಮಾನ ಆಗಿದೆ. ಪೊಲೀಸರ ರಕ್ಷಣೆಯಲ್ಲಿ ಕಾರ್ತಿಕ್ ಇದ್ದಾನೆ? ಯಾವ ಕಾರಣಕ್ಕೆ ಇನ್ನೂ ಕಾರ್ತಿಕ್ ಬಂಧಿಸಿಲ್ಲ? ಕೋರ್ಟ್ ಗೆ ಹಾಜರುಪಡಿಸಿಲ್ಲ ಹೇಳಿ? ನನ್ನ ಬಳಿ ಇರುವ ಪೆನ್ ಡ್ರೈವ್ ನಿಮ್ಮ ಸರ್ಕಾರದ ವರ್ಗಾವಣೆಯ ಭ್ರಷ್ಟಾಚಾರದ್ದು. ಅದನ್ನು ನಾನು ಈಗ ಬಿಟ್ಟರೆ ಅದು ನನ್ನದೇ ಸೃಷ್ಟಿ ಅಂತಾ ಬೇಕಾದರೆ ನೀವು ಹೇಳ್ತೀರಿ ಎಂದು ಹೆಚ್ಡಿಕೆ ಗುಡುಗಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)