ಕೆಲವು ಒಣಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದಂತೆ. ಇದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಯಾಗುತ್ತದೆಯಂತೆ.
ಇದರಲ್ಲಿ ಕಬ್ಬಿಣಾಂಶವಿದ್ದು, ಇದು ರಕ್ತ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಆದರೆ ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆಯಂತೆ.
ಅಂಜೂರ : ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫೈಬರ್ ಅಂಶ ಕಂಡುಬರುತ್ತದೆ. ಇದನ್ನು ಖಾಲಿ ಹೊಟ್ಟೆಯಲ್ಲಿ ತಿಂದರೆ ಜೀರ್ಣಕ್ರಿಯೆಯಲ್ಲಿ ಸಮಸ್ಯೆಯಾಗುತ್ತದೆಯಂತೆ. ಇದರಿಂದ ಹೊಟ್ಟೆಯ ಸೆಳೆತ, ನೋವು ಉಂಟಾಗುತ್ತದೆಯಂತೆ.
ವಾಲ್ನಟ್ಸ್ : ಇದರಲ್ಲಿ ಒಮೆಗಾ 3 ಕೊಬ್ಬಿನಾಮ್ಲ ಸಮೃದ್ಧವಾಗಿದೆ. ಇದನ್ನು ಖಾಲಿ ಹೊಟ್ಟೆಯಲ್ಲಿ ತಿಂದರೆ ಜೀರ್ಣಕ್ರಿಯೆಲ್ಲಿ ಸಮಸ್ಯೆಯಾಗುತ್ತದೆಯಂತೆ.
ಖರ್ಜೂರ : ಇದರಲ್ಲಿ ನೈಸರ್ಗಿಕ ಸಕ್ಕರೆಯಂಶ ಹೆಚ್ಚಾಗಿರುತ್ತದೆ. ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆಯಂತೆ.