ಬೆಂಗಳೂರು: ದೇವರ ಭಜನೆಯಲ್ಲಿ ಮಗ್ನರಾಗಿದ್ದ ಸಂದರ್ಭ ಕಿಟಕಿಯಿಂದ ಮಹಿಳೆಯ (Woman) ಸರ ಕದ್ದು (Chain Snatch) ಆರೋಪಿ ಪರಾರಿಯಾಗಿರುವ ಘಟನೆ ನಂದಿನಿ ಲೇಔಟ್ನ (Nandini Layout) ಶಂಕರನಗರ (Shankar Nagar) ಗಣೇಶ ದೇಗುಲದಲ್ಲಿ ನಡೆದಿದೆ.
Bangalore Rain: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆಯಿಂದ ಧಾರಾಕಾರ ಮಳೆ: ವಾಹನ ಸವಾರರ ಪರದಾಟ, ಟ್ರಾಫಿಕ್ ಜಾಂ!
ಅಕ್ಟೋಬರ್ 11ರಂದು ನಡೆದ ಘಟನೆ ಭಕ್ತರೊಬ್ಬರ ಮೊಬೈಲ್ನಲ್ಲಿ ಸೆರೆಯಾಗಿದೆ. ಮಂಗಳಾ ಎಂಬ ಮಹಿಳೆ ಅಕ್ಟೋಬರ್ 11ರ ಸಂಜೆ 6:30ರ ಸುಮಾರಿಗೆ ದೇಗುಲಕ್ಕೆ ಬಂದಿದ್ದರು. ಶಂಕರನಗರದ ನಿವಾಸಿಯಾಗಿರುವ ಮಂಗಳಾ ಪತಿ ರೈಲ್ವೆ ಇಲಾಖೆ ನಿವೃತ್ತ ಅಧಿಕಾರಿಯಾಗಿದ್ದರು. ಕಿಟಕಿ ಪಕ್ಕ ಕೂತು ಭಜನೆ ಮಾಡುತ್ತಿದ್ದಾಗ ಸಂಜೆ 7:17ರ ಸುಮಾರಿಗೆ ಕಳ್ಳ ಮಂಗಳಮ್ಮನ ಕುತ್ತಿಗೆಗೆ ಕೈ ಹಾಕಿ ಚಿನ್ನದ ಮಾಂಗಲ್ಯ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾನೆ.
ಸರ ಕಿತ್ತುಕೊಳ್ಳಲು ಯತ್ನಿಸಿದ ಸಂದರ್ಭ ಮಹಿಳೆ ಬಿಗಿಯಾಗಿ ಮಾಂಗಲ್ಯ ಹಿಡಿದುಕೊಂಡಿದ್ದಾರೆ. ಮಾಂಗಲ್ಯ ಸರವನ್ನು ಬಿಗಿಯಾಗಿ ಹಿಡಿದುಕೊಂಡ ಪರಿಣಾಮ 70 ಗ್ರಾಂ ತೂಕದ ಸರ ತುಂಡಾಗಿ ಮೂವತ್ತು ಗ್ರಾಂ ಕಳ್ಳನ ಕೈಗೆ ಸಿಕ್ಕಿದೆ. ಈ ವೇಳೆ ಮಹಿಳೆ ಜೋರಾಗಿ ಕೂಗಿಕೊಳ್ಳಲು ಪ್ರಾರಂಭಿಸಿದ್ದು, ಕಳ್ಳ ಅಲ್ಲಿಂದ ಪರಾರಿಯಾಗಿದ್ದಾನೆ.