ಖರ್ಜೂರ ನಿಮಗೆಲ್ಲ ಗೊತ್ತಿರುವ ಹಾಗೆ ತಿನ್ನಲು ಸಿಹಿಯಾಗಿ ರುತ್ತದೆ. ಅಂದರೆ ನಿಸರ್ಗದತ್ತವಾಗಿ ಇದರಲ್ಲಿ ಸಿಹಿ ಅಡುಗೆಗಳನ್ನು ಮಾಡುತ್ತೇವೆ. ಆ ಸಂದರ್ಭದಲ್ಲಿ ಡ್ರೈ ಫ್ರೂಟ್ಸ್ ಗಳನ್ನು ಹೆಚ್ಚಾಗಿ ಬಳಸುತ್ತೇವೆ
ಆದಾಗ್ಯೂ, ಮಧುಮೇಹವು ಯಾವುದೇ ಚಿಕ್ಕ ಮಕ್ಕಳಿಂದ ವೃದ್ಧರವರೆಗೆ ಎಲ್ಲರಲ್ಲೂ ಕಂಡುಬರುತ್ತಿದೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ, ಅದು ಇತರ ಅಂಗಗಳ ಮೇಲೆ ಪರಿಣಾಮ ಬೀರಬಹುದು. ಆದಾಗ್ಯೂ, ಸಿಹಿತಿಂಡಿಗಳನ್ನು ತಿನ್ನುವುದು ರೋಗವನ್ನು ಹೆಚ್ಚಿಸುತ್ತದೆ ಎಂಬ ವಾದವು ಪ್ರಮುಖವಾಗಿದೆ.
- ಖರ್ಜೂರ ನಿಮಗೆಲ್ಲ ಗೊತ್ತಿರುವ ಹಾಗೆ ತಿನ್ನಲು ಸಿಹಿಯಾಗಿ ರುತ್ತದೆ. ಅಂದರೆ ನಿಸರ್ಗದತ್ತವಾಗಿ ಇದರಲ್ಲಿ ಸಕ್ಕರೆ ಅಂಶ ಮೊದಲೇ ಇರುತ್ತದೆ.
- ಸಿಹಿ ಅಂಶವನ್ನು ಬೇಡುವ ವಿವಿಧ ಆಹಾರ ಪದಾರ್ಥ ಗಳಲ್ಲಿ ನೀವು ಖರ್ಜೂರವನ್ನು ಸೇರಿಸಿ ಸೇವಿಸ ಬಹುದು. ಅಷ್ಟೇ ಅಲ್ಲದೆ ಬೇರೆ ಬಗೆಯ ಆಹಾರಗಳಲ್ಲಿ ಹೆಚ್ಚು ವರಿಯಾಗಿ ಸಿಗುವ ಸಕ್ಕರೆ ಪ್ರಮಾಣವನ್ನು ಸೇವಿಸುವ ಸಾಧ್ಯತೆ ಯಿಂದ ತಪ್ಪಿಸಿಕೊಳ್ಳ ಬಹುದು.
- ಖರ್ಜೂರಗಳಲ್ಲಿ ನಾರಿನ ಅಂಶ ಹೆಚ್ಚಾಗಿದ್ದು ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ಕರುಳಿನ ಚಟುವಟಿಕೆ ಗಳನ್ನು ನಿರ್ವಹಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
- ಖಾಲಿ ಹೊಟ್ಟೆಯಲ್ಲಿ ಖರ್ಜೂರ ಸೇವನೆ ಮಾಡುವುದ ರಿಂದ ಹೊಟ್ಟೆ ತುಂಬಿದ ಅನುಭವ ಉಂಟಾಗುತ್ತದೆ ಮತ್ತು ಬೇರೆ ಬಗೆಯ ಅನಾರೋಗ್ಯಕರ ಆಹಾರಗಳನ್ನು ಸೇವಿಸುವ ಸಾಧ್ಯತೆ ಇಲ್ಲವಾಗುತ್ತದೆ. ಇದರಿಂದ ಆರೋಗ್ಯಕರವಾದ ಜೀರ್ಣಶಕ್ತಿ ನಿಮ್ಮದಾಗುತ್ತದೆ ಮತ್ತು ತೂಕ ನಿರ್ವಹಣೆ ಕೂಡ ಸಾಧ್ಯ ವಾಗುತ್ತದೆ.
- ಖರ್ಜೂರಗಳಲ್ಲಿ ಆಂಟಿ ಆಕ್ಸಿಡೆಂಟ್ ಗುಣಲಕ್ಷಣಗಳು ಹೆಚ್ಚಾಗಿ ಸಿಗುತ್ತವೆ.ಇದರಲ್ಲಿ ಸಿಗುವ ಫಿನೋಲಿಕ್ ಆಮ್ಲ ದೈಹಿಕ ಆಕ್ಸಿಡೆ ಟೀವ್ ಒತ್ತಡವನ್ನು ನಿರ್ವಹಣೆ ಮಾಡುವಲ್ಲಿ ಕೆಲಸ ಮಾಡುತ್ತದೆ.
- ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಪ್ರತಿ ದಿನ ಖರ್ಜೂ ರವನ್ನು ಸೇವಿಸುವುದರಿಂದ ನಿಮಗೆ ಈ ಲಾಭ ಗಳು ಪೂರ್ಣ ಪ್ರಮಾಣದಲ್ಲಿ ಸಿಗುತ್ತವೆ. ಇವುಗಳ ಸೇವ ನೆಯಿಂದ ನೀವು ನಿಮ್ಮ ಆರೋಗ್ಯವನ್ನು ಕಾಪಾಡಿ ಕೊಳ್ಳಬಹುದು.