ಬೆಂಗಳೂರು: ಮಾಜಿ ಸಚಿವ ಹೆಚ್ಡಿ ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಕುರಿತು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಯವರು ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಬಳಿ ಚರ್ಚೆ ಮಾಡಬೇಡಿ ಎಂದು ಹೇಳಿದ್ದಾರೆ.
ತೂಕ ಕಡಿಮೆ ಮಾಡಿಕೊಳ್ಳುವಾಗ ಮೀನು ಮತ್ತು ಚಿಕನ್ʼಗಳಲ್ಲಿ ಯಾವುದು ಒಳ್ಳೆಯದು..? ಇಲ್ಲಿದೆ ನೋಡಿ
ಸುದ್ದಿಗಾರರು ಸೂರಜ್ ರೇವಣ್ಣ ವಿರುದ್ಧದ ಆರೋಪ ಸಂಬಂಧ ಕೇಳಿದ್ದಕ್ಕೆ ಹೆಚ್ಡಿಕೆ ಗರಂ ಆದರು. ರಾಜ್ಯದ ಸಮಸ್ಯೆ ಸಂಬಂಧಪಟ್ಟ ವಿಚಾರಗಳನ್ನು ಚರ್ಚೆ ಮಾಡಿ. ಅದು ಬಿಟ್ಟು ಇಂತಹ ವಿಚಾರಗಳ ಬಗ್ಗೆ ಅವಶ್ಯಕತೆ ಏನಿದೆ?. ಕಾನೂನು ಇದೆ ಕಾನೂನಡಿ ನಡೆಯಲಿದೆ. ಯಾಕೆ ಪ್ರಕರಣ ಬರುತ್ತಿದೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ನನ್ನ ಬಳಿ ಆ ತರಹದ ಪ್ರಶ್ನೆಗಳನ್ನ ಕೇಳಬೇಡಿ ಎಂದರು.