ಬೆಂಗಳೂರು:- ಕೃಷಿ ಖಾತೆ ಬಯಸಿದ್ದ ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದೆ. ಇನ್ನು ಖಾತೆ ಹಂಚಿಕೆ ಬಳಿಕ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸಚಿವ ಸಂಪುಟ ಸಭೆಯಲ್ಲಿ ಖಾತೆ ಹಂಚಿಕೆ ಮಾಡಿದ್ದು, ಕೃಷಿ ಖಾತೆ ನಿರೀಕ್ಷೆ ಇತ್ತು, ಆದರೆ ಮೋದಿ ತೀರ್ಮಾನ ಮಾಡಿದ್ದಾರೆ. ದೇಶದ ಅಭಿವೃದ್ಧಿಗೆ ಪೂರಕವಾಗಿ ನಿರೀಕ್ಷೆ ಮಾಡಿ ಖಾತೆ ನೀಡಿದ್ದಾರೆ. ಜೂನ್ 11 ಸಂಜೆ 5 ಗಂಟೆಗೆ ಅಧಿಕಾರ ವಹಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
Ramanagara: ಮಾಜಿ ಸಂಸದ ಡಿಕೆ ಸುರೇಶ್ ಪರ ಬೆಟ್ಟಿಂಗ್ ಆಡಿದ್ದ ವ್ಯಕ್ತಿ ನೇಣಿಗೆ ಶರಣು!
ಸಚಿವ ಸಂಪುಟ ಸಭೆಯಲ್ಲಿ ಖಾತೆ ಹಂಚಿಕೆ ಮಾಡಿದ್ದಾರೆ. ವಿಶ್ವಾಸ ಇಟ್ಟು ಖಾತೆ ಹಂಚಿಕೆ ಮಾಡಿದ್ದಾರೆ. ದೇಶದ ಅಭಿವೃದ್ಧಿಗೆ ಪೂರಕವಾಗಿ ನಿರೀಕ್ಷೆ ಮಾಡಿ ಖಾತೆ ನೀಡಿದ್ದಾರೆ. ನಾಳೆ ಸಂಜೆ 5 ಗಂಟೆಗೆ ಅಧಿಕಾರ ವಹಿಸಿಕೊಳ್ಳುತ್ತೇನೆ. ಕನ್ನಡಿಗರ ಪರವಾಗಿ ಪ್ರಧಾನಿಯವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು
ಪ್ರಹ್ಲಾದ್ ಜೋಷಿಯವರಿಗೆ ಆಹಾರ ಖಾತೆ ಕೊಟ್ಟಿದ್ದಾರೆ. ದೊಡ್ಡ, ಪ್ರಮುಖವಾದ ಇಲಾಖೆ ನೀಡಿದ್ದಾರೆ. ನನ್ನ ವಿಚಾರದಲ್ಲಿ ವಿಶೇಷವಾದ ನಂಬಿಕೆ ಇಟ್ಟು ಖಾತೆ ನೀಡಿದ್ದಾರೆ. ನನ್ನ ಮೇಲೆ ಸವಾಲಿದೆ. ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡಲು ಕೆಲಸ ಮಾಡಬೇಕಿದೆ. ಕರ್ನಾಟಕಕ್ಕೆ ಅಂತ ಮಾತ್ರ ಹೇಳಲ್ಲ. ದೇಶಾದ್ಯಂತ ಸುತ್ತಾಡಿ ಬದಲಾವಣೆ ತರಲು ಬಯಸಿದ್ದೇನೆ ಎಂದು ಸ್ಪಷ್ಟಪಡಿಸಿದರು.
ನನ್ನ ಜೀವನದಲ್ಲಿ ಅತಿ ದೊಡ್ಡ ಸವಾಲು. ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳು ಇವೆ. ಅವುಗಳನ್ನು ಈಗ ಚರ್ಚೆ ಮಾಡುವುದಿಲ್ಲ. ದೇಶದ ಪ್ರಗತಿಗೆ ಕೆಲಸ ಮಾಡಬೇಕಿದೆ. ಎಲ್ಲವನ್ನು ಗಮನಿಸಿ ಇಲಾಖೆಯನ್ನು ಮೋದಿ ಕೊಟ್ಟಿದ್ದಾರೆ. ಪ್ರಮಾಣಿಕವಾಗಿ ಕ್ಷಣ ವ್ಯರ್ಥಮಾಡದೆ ಕೆಲಸ ಮಾಡುತ್ತೇನೆ. ರೂಟ್ ಮ್ಯಾಪ್ ಸಿದ್ದಮಾಡಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.