ಬೆಂಗಳೂರು: ರೋಚಕ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಟೀಂ ಇಂಡಿಯಾ ಕಪ್ ಎತ್ತಿ ಹಿಡಿದು ಸಂಭ್ರಮಿಸಿತು. ರಾಷ್ಟ್ರಪತಿ, ಪ್ರಧಾನಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿ ಸೇರಿದಂತೆ ದೇಶದ ಗಣ್ಯಾತಿಗಣ್ಯರು ತಂಡದ ಈ ಸಾಧನೆಗೆ ಪ್ರಶಂಸೆಯ ಸುರಿಮಳೆಗೈದಿದ್ದಾರೆ. ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
Consuming Milk After Eating Fish: ಮೀನು ತಿಂದ್ಮೇಲೆ ತಪ್ಪಿಯೂ ಹಾಲು ಕುಡಿಯಬೇಡಿ..! ಯಾಕೆ ಗೊತ್ತಾ..?
ಇದರ ಬೆನ್ನಲ್ಲೇ ‘ಪ್ರತಿಯೊಬ್ಬ ಆಟಗಾರನೂ ಟೀಂ ಇಂಡಿಯಾದ ಈ ಯಶಸ್ಸಿಗೆ ಶ್ರಮಿಸಿದ್ದು, ರಾಷ್ಟ್ರ ಹೆಮ್ಮೆಪಡುವಂತೆ ಮಾಡಿದ್ದಾರೆ. ವೆಸ್ಟ್ ಇಂಡೀಸ್ನಲ್ಲಿ 2007ರ ಏಕದಿನ ವಿಶ್ವಕಪ್ ವೈಫಲ್ಯದ ನಂತರ 2024ರಲ್ಲಿ ಟಿ-20 ಕಪ್ ಗೆದ್ದಿದ್ದೇವೆ. ಭಾರತೀಯ ಕ್ರಿಕೆಟ್ ಶಕ್ತಿಶಾಲಿಯಾಗಿ ಹೊರಹೊಮ್ಮಿದೆ. ನನ್ನ ಸ್ನೇಹಿತ ದ್ರಾವಿಡ್ ನಾಯಕತ್ವದಲ್ಲಿ ಕಪ್ ಗೆದ್ದಿರುವುದು ಸಂತೋಷ ತಂದಿದೆ” ಎಂದು ಸಚಿನ್ ತೆಂಡೂಲ್ಕರ್ ಪೋಸ್ಟ್ ಮಾಡಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)