ಆಸ್ಟ್ರೇಲಿಯಾ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಸೋಲು ಅನುಭವಿಸಿದ ಹೊರತಾಗಿಯೂ ಆರಂಭಿಕ ಬ್ಯಾಟ್ಸ್ಮನ್ ಋತುರಾಜ್ ಗಾಯಕ್ವಾಡ್ ಅವರನ್ನು ನಾಯಕ ಸೂರ್ಯಕುಮಾರ್ ಯಾದವ್ ಮುಕ್ತಕಂಠಿಂದ ಗುಣಗಾನ ಮಾಡಿದ್ದಾರೆ. ಗಾಯಕ್ವಾಡ್ ಅತ್ಯಂತ ವಿಶೇಷ ಆಟಗಾರ ಎಂದು ಶ್ಲಾಘಿಸಿದ್ದಾರೆ.
ಮಂಗಳವಾರ ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಭಾರತ ತಂಡ ಆರಂಭದಲ್ಲಿಯೇ ಯಶಸ್ವಿ ಜೈಸ್ವಾಲ್ ಮತ್ತು ಇಶಾನ್ ಕಿಶನ್ ಅವರ ವಿಕೆಟ್ಗಳನ್ನು ಕಳೆದುಕೊಂಡಿತ್ತು. ಆದರೂ ಕುಗ್ಗದ ಋತುರಾಜ್ ಗಾಯಕ್ವಾಡ್ ಕೊನೆಯವರೆಗೂ ಬ್ಯಾಟ್ ಮಾಡಿ ಅಜೇಯ 123 ರನ್ಗಳನ್ನು ಗಳಿಸಿದರು. ಆ ಮೂಲಕ ಭಾರತ ತಂಡ 222 ರನ್ಗಳನ್ನು ಕಲೆ ಹಾಕಲು ನೆರವು ನೀಡಿದರು.
![Demo](https://ainlivenews.com/wp-content/uploads/2023/12/spoorthi-1.jpg)
ಪೋಸ್ಟ್ ಮ್ಯಾಚ್ ಪ್ರಸೆಂಟೆಷನ್ನಲ್ಲಿ ಮಾತನಾಡಿದ ಸೂರ್ಯಕುಮಾರ್ ಯಾದವ್, “ಅದ್ಭುತ. ನಾನು ಔಟ್ ಆದ ಬಳಿಕ ಋತುರಾಜ್ ಗಾಯಕ್ವಾಡ್ ಅವರು ಕೊನೆಯವರೆಗೂ ಬ್ಯಾಟ್ ಮಾಡಿದ್ದರು. ಗಾಯಕ್ವಾಡ್ ಅತ್ಯಂತ ವಿಶೇಷ ಆಟಗಾರ ಎಂದು ನಾನು ಫ್ರಾಂಚೈಸಿ ಕ್ರಿಕೆಟ್ ವೇಳೆ ಸಾಕಷ್ಟು ಬಾರಿ ಹೇಳಿದ್ದೇನೆ. ಅವರ ಬ್ಯಾಟಿಂಗ್ನ ಹಾದಿ ಅತ್ಯುತ್ತಮವಾಗಿತ್ತು. ಅಂತಿಮವಾಗಿ ನಮ್ಮ ಹುಡುಗರ ಬಗ್ಗೆ ನಮಗೆ ಹೆಮ್ಮೆ ಇದೆ,” ಎಂದು ಹೇಳಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)