ಚಿಕ್ಕಬಳ್ಳಾಪುರ: ಅಲೋಕ್ ವಿಶ್ವನಾಥ್ಗೆ ಟಿಕೆಟ್ ಕೊಡಲ್ಲ ಅಂದ್ರೆ ನನಗೆ ಟಿಕೆಟ್ ಕೊಡಲಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಸಹ ಅಭ್ಯರ್ಥಿ ಎನ್ನುವ ಮೂಲಕ ಶಾಸಕ ಎಸ್ ಆರ್ ವಿಶ್ವನಾಥ್ ಕೂಡ ಹೊಸಬಾಂಬ್ ಸಿಡಿಸಿದ್ದಾರೆ. ಸುಧಾಕರ್ ವಿರುದ್ದ ಈಗಾಗಲೆ ಜಿಲ್ಲೆಯಲ್ಲಿ ವಿರೋಧಿ ಅಲೆ ಇದೆ. ಅವರಿಗೆ ಕೊಡಬಾರದು ಎಂದು ಸಾಕಷ್ಟು ಜನ ಹೇಳ್ತಿದ್ದಾರೆ. ಅಲೋಕ್ ವಿಶ್ವನಾಥ್ ಆರು ತಿಂಗಳಿಂದಲೇ ತಯಾರಿ ಶುರು ಮಾಡಿದ್ದಾರೆ. ಸುಧಾಕರ್ ನನ್ನ ಬಳಿಯು ಮಾತನಾಡಿ ನನಗೆ ಯಾರು ಗೌರವ ಕೊಡ್ತಿಲ್ಲ. ಯಾರು ಕರೆ ಮಾಡ್ತಿಲ್ಲ, ನಾಲ್ಕು ವರ್ಷ ಸಂಸದನಾಗಿರ್ತೀನಿ ಎಂದು ಹೇಳಿದ್ದಾರೆ.
ವಿವಾಹ ಯೋಜನೆ ಲಾಭ ಪಡೆಯಲು ಸಹೋದರನನ್ನೇ ಮದುವೆಯಾದ ಮಹಿಳೆ! ಮುಂದೇನಾಯ್ತು.?
ಆದರೆ ನನ್ನ ಮಗ ಇನ್ನೂ 25 ವರ್ಷ ರಾಜಕೀಯ ಮಾಡಬೇಕಿದೆ. ಹೀಗಾಗಿ ಅಲೋಕ್ಗೆ ಟಿಕೆಟ್ ಸಿಗಬೇಕು ಎಂದು ಸರ್ವೆಯಲ್ಲೂ ಮುಖಂಡರು ಹೇಳಿದ್ದಾರೆ. ಅಲೋಕ್ಗೆ ಟಿಕೆಟ್ ಕೊಡಲ್ಲ ಅಂದ್ರೆ ನನಗೆ ಕೊಡಲಿ ನಾನು ಸ್ವರ್ಧೆ ಮಾಡ್ತೀನಿ. ನಮ್ಮ ಕ್ಷೇತ್ರವನ್ನ ಬೇರೊಬ್ಬರಿಗೆ ಬಿಟ್ಟು ಕೊಡಲು ನಾವು ತಯಾರಿಲ್ಲ. ನಮ್ಮ ಯಲಹಂಕ ಒಂದು ಕ್ಷೇತ್ರದಲ್ಲೇ ಎರಡು ಕ್ಷೇತ್ರಗಳಷ್ಟು ಮತಗಳಿವೆ. ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದು ಕೊಳ್ತಾರೆ ಎನ್ನುವ ವಿಶ್ವಾಸವಿದೆ. ದೆಹಲಿಯಿಂದ ಆಗಮಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ.