ರಾಮನಗರ:- ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿದರು.
ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ – ಕಾಂಗ್ರೆಸ್ ನಿಂದ ಮಿಡ್ ನೈಟ್ ಆಪರೇಷನ್ !
ಇದು ನಮ್ಮ ಸಂಸ್ಕೃತಿ ಅಲ್ಲ. ಚುನಾವಣೆಯನ್ನು ಏನಿದ್ದರೂ ನಮ್ಮ ತತ್ವ, ಸಿದ್ಧಾಂತದ ಮೇಲೆ ಎದುರಿಸಬೇಕೇ ವಿನಹ ಈ ರೀತಿಯ ಕೃತ್ಯಗಳನ್ನು ಸಗಬಾರದು. ಚುನಾವಣೆ ವಿರುದ್ಧ ದಿಕ್ಕಿನಿಂದ ಸಾಗುತ್ತಿದೆ ಎಂಬುದು ಅರಿವಾಗಿರಬೇಕು. ಹೀಗಾಗಿ, ಹತಾಶೆಯಿಂದ ಈ ರೀತಿ ಮಾಡಿಸುತ್ತಿದ್ದಾರೆ ಎಂದು ಹೇಳಿದರು.
ಚುನಾವಣೆಯನ್ನು ಆರೋಗ್ಯಕರವಾಗಿ ಎದುರಿಸಬೇಕು. ಅದರ ಬದಲು ಈ ರೀತಿ ಅಡ್ಡದಾರಿ ಹಿಡಿಯಬಾರದು. ಪ್ರಚಾರಕ್ಕೆ ತೆರಳಿದ್ದವರ ಮೇಲೆ ಹಲ್ಲೆ ನಡೆಸಿರುವ ವಿಚಾರವಾಗಿ ಈಗಾಗಲೇ ಡಿಐಜಿ ಅವರ ಜೊತೆ ಚರ್ಚಿಸಿದ್ದೇನೆ. ಚುನಾವಣಾ ಆಯೋಗಕ್ಕೂ ದೂರು ನೀಡಲಿದ್ದೇವೆ ಎಂದು ಅವರು ತಿಳಿಸಿದರು.
ಡಾಕ್ಟರ್ ವರ್ಸಸ್ ಡಾಕು’ ಎಂಬ ಪದ ಬಳಕೆ ಬಗ್ಗೆಯೂ ಮಂಜುನಾಥ್ ಆಕ್ಷೇಪ ವ್ಯಕ್ತಪಡಿಸಿದರು. ಈ ರೀತಿ ಟೀಕೆಗಳನ್ನು ಮಾಡಬಾರದು. ಚುನಾವಣೆಯಲ್ಲಿ ವೈಯಕ್ತಿಕ ಟೀಕೆಗಳನ್ನು ಮಾಡುವುದು ಸರಿಯಲ್ಲ. ನಮ್ಮ ತತ್ವ ಸಿದ್ಧಾಂತಗಳ ಆಧಾರದಲ್ಲಿಯೇ ಪ್ರಚಾರ ಮಾಡಬೇಕು ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)