ಚಿಕ್ಕಬಳ್ಳಾಪುರ : ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಫಲಿತಾಂಶದ ಮೇಲೆ ಎಲ್ಲರ ಕಣ್ಣುನೆಟ್ಟಿದೆ. ಕಾರಣ, ಬಿಜೆಪಿ ಮತ್ತು ಕಾಂಗ್ರೆಸ್ ಪಾರ್ಟಿಗಳು ಅಭ್ಯರ್ಥಿ ಆಯ್ಕೆಯ ವಿಚಾರದಲ್ಲಿ ಅಳೆದುತೂಗಿ ಅಭ್ಯರ್ಥಿ ಅಂತಿಮ ಮಾಡಿದ್ದು ಒಂದು. ಇನ್ನೊಂದು ಕಡೆ, ಬಿಜೆಪಿ ಅಭ್ಯರ್ಥಿ ವಿರುದ್ದ ಎದ್ದಿದ್ದ ಅಪಸ್ವರ. ಕಾಂಗ್ರೆಸ್ಸಿನಿಂದ ಎಂ.ಎಸ್.ರಾಮಯ್ಯನವರ ಮೊಮ್ಮಗ ರಕ್ಷಾ ರಾಮಯ್ಯ, ಬಿಜೆಪಿಯಿಂದ ಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್, ಸಿಪಿಐ (ಎಂ) ಅಭ್ಯರ್ಥಿ ಮುನಿವೆಂಕಟಪ್ಪನವರೂ ಕಣದಲ್ಲಿದಾರೆ.
ಕ್ಷೇತ್ರದಲ್ಲಿ ಶೇ. 76.82 ಮತದಾನವಾಗಿದೆ. ಈ ಕ್ಷೇತ್ರದಲ್ಲಿ ಯಾರಿಗೆ ಗೆಲುವು ಎನ್ನುವ ವಿಚಾರದಲ್ಲಿ ಮಾಜಿ ಸಚಿವರು ಭವಿಷ್ಯ ನುಡಿದಿದ್ದಾರೆ. ಮಾಜಿ ಸಚಿವ ಮತ್ತು ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಟಿಕೆಟಿನಿಂದ ಸ್ಪರ್ಧಿಸಿ ಸೋತಿದ್ದ ಎಂಟಿಬಿ ನಾಗರಾಜ್, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಡಾ.ಸುಧಾಕರ್ ಗೆಲುವು ಸಾಧಿಸಲಿದ್ದಾರೆ ಎನ್ನುವ ಭವಿಷ್ಯವನ್ನು ನುಡಿದಿದ್ದಾರೆ.
Hair Care: ಕೂದಲು ದಟ್ಟವಾಗಿರಲು ವಾರಕ್ಕೆ ಎಷ್ಟು ಬಾರಿ ಎಣ್ಣೆ ಹಚ್ಚಬೇಕು ಗೊತ್ತಾ?
ಚಿಕ್ಕಬಳ್ಳಾಪುರದಲ್ಲಿ ಮೈತ್ರಿ ಅಭ್ಯರ್ಥಿ ಮತ್ತು ನನ್ನ ಆತ್ಮೀಯರೂ ಆಗಿರುವ ಡಾ. ಸುಧಾಕರ್ ಸುಮಾರು 1.25 ಲಕ್ಷಗಳ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ನನ್ನ ಕುಟುಂಬದ ಹೆಸರು ಮೊದಲಿನಲ್ಲಿತ್ತು ಎಂದು ಎಂಟಿಬಿ ನಾಗರಾಜ್ ಹೇಳಿದ್ದಾರೆ.