ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ ವ್ಯವಹಾರಗಳ ಖಾತೆ ಸಚಿವರಾದ ಪ್ರಲ್ಹಾದ್ ಜೋಶಿ ಅವರು ಇನ್ನಷ್ಟು ಉನ್ನತ ಹುದ್ದೆಗೆ ಏರಲಿ ಎಂದು ಹಾಲು ಮತಮಹಾಸಭಾದ ಅಧ್ಯಕ್ಷ ರುದ್ರಣ್ಣ ಗುಳಗುಳಿ ಶುಭ ಹಾರೈಕೆ ಮಾಡಿದರು.
ನಗರದ ಮಯೂರ ಎಸ್ಟೇಟ್ ನಲ್ಲಿರುವ ಕೇಂದ್ರ ಆಹಾರ ಹಾಗೂ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸದಲ್ಲಿಂದು ನೂತನ ಸಚಿವರಾದ ಪ್ರಲ್ಹಾದ್ ಜೋಶಿ ಅವರಿಗೆ ಸನ್ಮಾನಿಸಿ ಶುಭ ಹಾರೈಸಿ ಅವರು ಮಾತನಾಡಿದರು.
ಧಾರವಾಡ ಜಿಲ್ಲಾ ಪಂಚಾಯತ ಮಾಜಿ ಸಿ.ಎನ್. ಶ್ಯಾಗೋಟಿ,ಮುಖಂಡರಾದ
ದ್ಯಾವಪ್ಪ ಐರಣಿ, ಹಾಲು ಮತ ಸಮಾಜದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ಮುರುಗೋಡ , ಮಂಜುನಾಥ ಮಕ್ಕಳಗೇರಿ, ಶಿವು ಬೆಳಹಾರ, ಮಂಜುನಾಥ ನಡಹಟ್ಟಿ ಮುಂತಾದವರಿದ್ದರು.