ನವದೆಹಲಿ:- ಒಂದೆಡೆ ಕರ್ನಾಟದಲ್ಲಿ ಬರಗಾಲ ಉಂಟಾಗಿದ್ರೆ ಇನ್ನೊಂದೆಡೆ ನೀರಿಗಾಗಿ ಮತ್ತೆ ತಮಿಳುನಾಡು ಕ್ಯಾತೆ ತೆಗೆದಿದೆ.
ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಆಗ್ರಹಿಸಿದೆ. ಕುಡಿಯಲು 0.5 ಟಿಎಂಸಿ ನೀರು ಸಾಕು, ಕುಡಿಯುವ ನೀರಿನ ನೆಪದಲ್ಲಿ ನೀರು ಬಿಡುಗಡೆಗೆ ನಿರಾಕರಿಸದೆ, ನಮ್ಮ ತಿಂಗಳ ಪಾಲು 2.5 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ನಿನ್ನೆ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಒತ್ತಾಯಿಸಿದ್ದಾರೆ.
Breaking News: ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಕೊಲೆ… ಆರೋಪಿ ಅರೆಸ್ಟ್!
ಇನ್ನು ಸಭೆಯಲ್ಲಿ ಮಾತನಾಡಿ ತಮಿಳುನಾಡು ಅಧಿಕಾರಿಗಳು, ‘ಮಳೆಯ ಕೊರತೆ ಹಿನ್ನಲೆ ಕರ್ನಾಟಕ ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಿಲ್ಲ, ನಿಗಧಿತ ಪ್ರಮಾಣದ ನೀರು ಹರಿಸಿಲ್ಲ. ಫೆ.1 ರಿಂದ ಏಪ್ರಿಲ್ 28 ವರೆಗೂ ಪರಿಸರಕ್ಕೆ 7.33 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ, ಕರ್ನಾಟಕ 5.31 ಟಿಎಂಸಿ ನೀರು ಮಾತ್ರ ಹರಿಸಿದೆ. ಇದರಲ್ಲೂ 2.016 ಟಿಎಂಸಿ ಬಾಕಿ ಉಳಿಸಿಕೊಂಡಿದೆ. ಮೆಟ್ಟೂರಿನಲ್ಲಿ 20 ಟಿಎಂಸಿಯಷ್ಟು ನೀರಿದೆ. ಕುಡಿಯಲು ಮತ್ತು ಪರಿಸರಕ್ಕೆ ಬಳಸಲಾಗುತ್ತಿದೆ. ಬಾಕಿ ಉಳಿಸಿಕೊಂಡ ಪರಿಸರ ಬಳಕೆ ನೀರು ಬಿಡುಗಡೆ ಮಾಡಬೇಕು ಎಂದಿದ್ದಾರೆ.
ಇದಕ್ಕೆ ಉತ್ತರಿಸಿದ ಕರ್ನಾಟಕ, ‘ಕಾವೇರಿ ಬೇಸಿನ್ನಲ್ಲಿರುವ ನೀರು ಕುಡಿಯಲು ಮಾತ್ರ ಸಾಕಾಗಲಿದೆ ಎಂದಿದ್ದಾರೆ. ಈ ಮಧ್ಯೆ ಪ್ರವೇಶಿಸಿದ CWRC ಅಧ್ಯಕ್ಷ ವಿನೀತ್ ಗುಪ್ತಾ, ‘ಅದಾಗ್ಯೂ ಮೇ ತಿಂಗಳ ಬಿಳಿಗುಂಡ್ಲು ಬಳಿ 2.5 ಟಿಎಂಸಿ ಪರಿಸರ ನೀರು ಹರಿವಿನ ಬಗ್ಗೆ ಖಚಿತಪಡಿಸಿಕೊಳ್ಳಲು ಕರ್ನಾಟಕಕ್ಕೆ ಸೂಚನೆ ನೀಡಿದರು. ಆದರೆ, ಈ ಇದಕ್ಕೆ ಪರಿಸ್ಥಿತಿ ಅವಲೋಕಿಸುವುದಾಗಿ ಕರ್ನಾಟಕ ಹೇಳಿದೆ. ಇನ್ನು ಈ 2.5 ಟಿಎಂಸಿ ಜೊತೆಗೆ ಕೊರತೆಯ ಭಾಗದಲ್ಲಿ 25 ಟಿಎಂಸಿ ನೀರು ಹರಿಸಲು ಸೂಚನೆ ನೀಡಲು ತಮಿಳುನಾಡು ಮನವಿ ಮಾಡಿದೆ.