ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಸದಾಶಿವನಗರ ರಸ್ತೆಯಲ್ಲಿ ಕಳೆದ ರಾತ್ರಿ ಕಠಪೂರ್ತಿ ಕುಡಿದು ಕಾರು ಚಲಾಯಿಸಿ ಯುವತಿ ನಡುರಸ್ತೆಯಲ್ಲಿ ರಂಪಾಟ ಮಾಡಿರುವ ಘಟನೆ ಜರುಗಿದೆ
ಹೆಚ್ಚಾಯ್ತು ಮಂಗನ ಕಾಯಿಲೆ: ಕಾಫಿನಾಡಲ್ಲಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ!
ಪ್ರಶ್ನೆ ಮಾಡಿದಕ್ಕೆ ಯುವತಿ ಆಟೋ ಚಾಲಕನ ಮೈ ಕೈ ಪರಚಿ ಗಾಯಪಡಿಸಿದ್ದಾಳೆ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಂಠಪೂರ್ತಿ ಕುಡಿದು ಯುವತಿಯೋರ್ವಳು ಅಡ್ಡಾದಿಡ್ಡಿ ವಾಹನ ಚಲಾಯಿಸುತ್ತಿದ್ದಳು. ಆಟೋ ಚಾಲಕ ನಿಶಾಂತ್ ಎಂಬುವವರು ಅಡ್ಡಾದಿಡ್ಡಿ ವಾಹನ ಚಾಲನೆ ಬಗ್ಗೆ ಪ್ರಶ್ನಿಸಿದಕ್ಕೆ ಯುವತಿ ಹಾಗೂ ಯುವತಿ ಜೊತೆಯಿದ್ದ ಯುವಕ ಇಬ್ಬರೂ ಆಟೋ ಚಾಲಕನ ಜೊತೆ ಗಲಾಟೆಗೆ ಇಳಿದಿದ್ದಾರೆ. ಈ ವೇಳೆ ಯುವತಿ ನಿಶಾಂತ್ ಮೇಲೆ ಹಲ್ಲೆ ನಡೆಸಿದ್ದಾಳೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಅಷ್ಟೇ ಅಲ್ಲದೆ ಆಟೋ ಡ್ರೈವರ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾಳೆ.
ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.