ಕೋಲಾರ:- ಕಲ್ಲುಗಣಿಗಾರಿಕೆ ವೇಳೆ ಕಲ್ಲು ಬಂಡೆ ಬಿದ್ದು ಕಾರ್ಮಿಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ೨೪ ಗಂಟೆ ಬಳಿಕ ಬಂಡೆಯಡಿ ಮೃತನ ಶವ ಪತ್ತೆಯಾಗಿದೆ.
ಸಚಿವ ಅಶ್ವಿನಿ ವೈಷ್ಣವ್ ಭೇಟಿ ಮಾಡಿದ HDK..ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ
೨ ನೇ ದಿನ ಬೃಹತ್ ಬಂಡೆ ತೆರವು ಕಾರ್ಯಾಚರಣೆ ನಡೆದಿದ್ದು, ಇಟಾಚಿ ಮೇಲೆ ಕಲ್ಲು ಬಂಡೆ ಬಿದ್ದು ಬಂಡೆ ಅಡಿ ಮೃತ ದೇಹ ಪತ್ತೆಯಾಗಿತ್ತು. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಹಳೇಪಾಳ್ಯ ಬಳಿ ಈ ಘಟನೆ ನಡೆದಿದೆ. ಕೆಜಿಎಫ್ ತಾಲ್ಲೂಕು ಕ್ಯಾಸಂಬಳ್ಳಿ ಗ್ರಾಮದ ಪ್ರವೀಣ್ ಮೃತ ವ್ಯಕ್ತಿ ಎನ್ನಲಾಗಿದೆ.
ಸ್ಥಳದಲ್ಲಿ ಅಧಿಕಾರಿಗಳ ದಂಡು ಬೀಡು ಬಿಟ್ಟಿದ್ದು, ಸ್ಥಳಕ್ಕೆ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಭೇಟಿ ನೀಡಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಸ್ಥಳದಲ್ಲಿ ಪೊಲೀಸರು, ಕಂದಾಯ ಇಲಾಖೆ ಅಧಿಕಾರಿಗಳು ಮೊಕ್ಕಾ ಹೂಡಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ಅಗ್ನಿ ಶಾಮಕ ದಳ ಸಿಬ್ಬಂದಿ ಯಿಂದ ಕಾರ್ಯಾಚರಣೆ ನಡೆದಿದೆ.