ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿರುವ ಗೃಹ ಸಚಿವ ಅಮಿತ್ ಶಾ ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. ರಾಜಸ್ಥಾನದ ನಾಗೌರ್ನಲ್ಲಿ ಅಮಿತ್ ಶಾ ರಥದಲ್ಲಿ (Chariot) ನಿಂತು ಪಕ್ಷದ ಪರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ವಿಶೇಷವಾಗಿ ವಿನ್ಯಾಸ ಮಾಡಲಾಗಿರುವ ರಥದ ಮೇಲಿನ ಭಾಗ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ರಥ ತಾಗಿದ ಕೂಡಲೇ ಕಿಡಿ ಹೊತ್ತಿಕೊಂಡಿದೆ. ಕೂಡಲೇ ರಥದ ಹಿಂದೆ ಇದ್ದ ಇತರ ವಾಹನಗಳನ್ನು ತಕ್ಷಣವೇ ನಿಲ್ಲಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು. ಪರ್ಬತ್ಸರ್ನಲ್ಲಿ ಎರಡೂ ಬದಿಗಳಲ್ಲಿ ಅಂಗಡಿಗಳು ಮತ್ತು ಮನೆಗಳಿರುವ ಸಾಲಿನಲ್ಲಿ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ. ಈ ಘಟನೆಯ ಬಳಿಕ ಶಾ ಅವರು ಮತ್ತೊಂದು ವಾಹನದ ಮೂಲಕ ಪರ್ಬತ್ಸರ್ಗೆ ತೆರಳಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.