ಬೆಂಗಳೂರು: ದತ್ತ ಪೀಠದ ಕುರಿತ ಸಂಪುಟ ತೀರ್ಮಾನ ಸುದೀರ್ಘ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸಂಪುಟ ಉಪಸಮಿತಿ ರಚನೆಯಾಗಿತ್ತು. ಆ ಉಪ ಸಮಿತಿಯು ಸಮಸ್ಯೆ ಪರಿಹಾರಕ್ಕೆ ಶಿಫಾರಸು ಮಾಡಿದೆ. ಉಪಸಮಿತಿ ಕೊಟ್ಟಿರುವ ವರದಿಯ ಕುರಿತು ಹೈಕೋರ್ಟ್ ಮುಂದೆ ಪ್ರಮಾಣಪತ್ರ ಸಲ್ಲಿಸಲು ಸಚಿವ ಸಂಪುಟ ಸಭೆಯು ತೀರ್ಮಾನಿಸಿದ್ದು ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: vijay devarakonda.. ‘’ಲೈಗರ್’’ ಸಿನಿಮಾಗಾಗಿ ಬೆತ್ತಲಾದ ನಟ ವಿಜಯ್ ದೇವರಕೊಂಡ; ಫೋಟೋ ವೈರಲ್

ದತ್ತಪೀಠಕ್ಕೆ ಅರ್ಚಕರ ನೇಮಕ ಮಾಡುವಂತೆ ಸುದೀರ್ಘ ಕಾಲದಿಂದ ಒತ್ತಾಯಿಸಲಾಗುತ್ತಿತ್ತು. ಆದರೆ, ಸಿದ್ದರಾಮಯ್ಯರ ನೇತೃತ್ವದ ಹಿಂದಿನ ಕಾಂಗ್ರೆಸ್ ಸರಕಾರವು ಹಿಂದೂಗಳ ಈ ಕೋರಿಕೆಯನ್ನು ಪುರಸ್ಕರಿಸಲಿಲ್ಲ. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರವು ಅದನ್ನು ಪುರಸ್ಕರಿಸಿದೆ. ಇದು ದೀರ್ಘ ಕಾಲದ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.