ವಿಜಯಪುರ:– ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ಜಿಲ್ಲೆಯ ಜನ ಗಾಬರಿ ಆಗಿದ್ದಾರೆ. ಜಿಲ್ಲೆಯ ತಿಕೋಟಾ ಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ.
ಜಿಲ್ಲೆಯಲ್ಲಿ ಕೇಳಿದ ಜೋರು ಶಬ್ದಕ್ಕೆ ಹೆದರಿ ಮನೆಯಿಂದಾಚೆ ಜನ ಓಡಿ ಬಂದ ಘಟನೆ ಜರುಗಿದೆ.
ಜಿಲ್ಲೆಯ ತಿಕೋಟಾ ತಾಲೂಕಿನ ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಕಳ್ಳಕವಟಗಿ, ಘೋಣಸಗಿ, ಹುಬನೂರ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಜೊತೆಗೆ ಮಹಾರಾಷ್ಟ್ರ ಗಡಿಭಾಗದ ಗ್ರಾಮಗಳಾದ ಮೊರಬಗಿ, ತಿಕ್ಕುಂಡಿ, ಆಸಂಗಿಯಲ್ಲೂ ಭೂಮಿ ನಡುಗಿದ ಅನುಭವ ಆಗಿದೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಜೋರು ಶಬ್ದಕ್ಕೆ ಅಡುಗೆ ಮನೆಯಲ್ಲಿನ ಪಾತ್ರೆ, ಪಗಡೆಗಳು ಬಿದ್ದಿವೆ.