ನವದೆಹಲಿ:- ಸುಪ್ರೀಂ ಕೋರ್ಟ್ ನಿಂದ ದೆಹಲಿ ಸಿಎಂ ಕೇಜ್ರಿವಾಲ್ಗೆ ಜಾಮೀನು ನೀಡಲು ಇಡಿ ವಿರೋಧ ವ್ಯಕ್ತಪಡಿಸಿದೆ.
ಬೇಸಿಗೆಯಲ್ಲಿ ಗರ್ಭಿಣಿಯರು ಈ ಸಲಹೆ ಪಾಲಿಸಿ..!
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ನೀಡುವುದನ್ನು ಗುರುವಾರ ಸುಪ್ರೀಂ ಕೋರ್ಟ್ನಲ್ಲಿ ವಿರೋಧಿಸಿದ ಜಾರಿ ನಿರ್ದೇಶನಾಲಯ ಚುನಾವಣೆಯಲ್ಲಿ ಪ್ರಚಾರ ಮಾಡುವುದು ಮೂಲಭೂತ ಹಕ್ಕಲ್ಲ. ಹೀಗಾಗಿ, ಚುನಾವಣೆಯ ಕಾರಣಕ್ಕೆ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ನೀಡಬಾರದು ಎಂದು ಆಗ್ರಹಿಸಿದೆ.
ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಹೊಸ ಅಫಿಡವಿಟ್ನಲ್ಲಿ ಇಡಿ, ಇದುವರೆಗೂ ಯಾವುದೇ ರಾಜಕೀಯ ನಾಯಕ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಪ್ರಚಾರದ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದಿಲ್ಲ ಎಂದು ಹೇಳಿದೆ
ಚುನಾವಣೆಗಾಗಿ ಪ್ರಚಾರ ಮಾಡುವ ಹಕ್ಕು ಮೂಲಭೂತ ಹಕ್ಕು ಅಥವಾ ಸಾಂವಿಧಾನಿಕ ಹಕ್ಕಲ್ಲ. ಇದು ಕಾನೂನುಬದ್ಧ ಹಕ್ಕು ಕೂಡ ಅಲ್ಲ ಎಂಬುದನ್ನು ಗಮನಿಸುವುದು ಪ್ರಸ್ತುತವಾಗಿದೆ. ಯಾವುದೇ ರಾಜಕೀಯ ನಾಯಕನು ಸ್ಪರ್ಧೆಗೆ ಇಳಿಯದಿದ್ದರೂ ಬೇರೆಯವರ ಪರ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಪಡೆದಿಲ್ಲ. ಬಂಧನದಲ್ಲಿದ್ದರೆ ಸ್ಪರ್ಧಿಸುವ ಅಭ್ಯರ್ಥಿಗೆ ಸಹ ಮಧ್ಯಂತರ ಜಾಮೀನು ನೀಡಲಾಗುವುದಿಲ್ಲ.” ಎಂದು ಇಡಿ ಹೇಳಿದೆ.