ಬೆಂಗಳೂರು: ಪ್ರಧಾನಿ ಮೋದಿ ಹಳ್ಳಿ-ಹಳ್ಳಿಗೆ ಹೋಗಿ ಕರ್ನಾಟಕದ ವಿಚಾರ ಪ್ರಚಾರ ಮಾಡ್ತಾರೆ, ಅದಕ್ಕೆ ಕಾಂಗ್ರೆಸ್ಗೆ ಹಿನ್ನಡೆ ಆಗುತ್ತದೆ ಎಂದು ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಕಿಡಿಕಾರಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಅವರು, ನಾನು ಅವತ್ತೇ ಹೇಳಿದ್ದೆ. ಮೋದಿ ಹರಿಯಾಣದಲ್ಲಿ (Hariyana) ಹಳ್ಳಿ ಹಳ್ಳಿಗೆ ಹೋಗಿ ಕರ್ನಾಟಕದ ವಿಚಾರ ಪ್ರಚಾರ ಮಾಡ್ತಾರೆ. ಆದ್ದರಿಂದ ಹಿನ್ನಡೆ ಆಗುತ್ತದೆ ಎಂದು ಹೇಳಿದ್ದೆ, ಈಗ ಅದು ಎಫೆಕ್ಟ್ ಆಗಿದೆ. ಹರಿಯಾಣದಲ್ಲಿ ಹಿನ್ನಡೆ ಆಗುತ್ತಿದೆ. ಪಾರ್ಟಿಗೆ ಮುಜುಗರ ಆಗಿದೆ ಎಂದು ಬೇಸರ ಹೊರಹಾಕಿದರು
ಮುಖ್ಯಮಂತ್ರಿಗಳು ರಾಜೀನಾಮೆ ಕೊಡಲಿ ಎಂಬ ನನ್ನ ಹೇಳಿಕೆ ಅಳಿಸಲು ಸಾಧ್ಯವಿಲ್ಲ. ನಾನು ಕಾಂಗ್ರೆಸ್ ಪಕ್ಷದ ದೃಷ್ಟಿಯಿಂದ ಆ ಮಾತನ್ನು ಹೇಳಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಧಕ್ಕೆ ಆದರೆ ನೋಟಿಸ್ ಕೊಡುತ್ತಾರೆ. ನಾನು ಸಕ್ರಿಯ ರಾಜಕಾರಣದಲ್ಲಿ ಇಲ್ಲ, ಪಕ್ಷ ಉಳಿಸಲು ಕೆಲಸ ಮಾಡುತ್ತೇನೆ ಎಂದರು.
ಹಾಗೆ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಫೆಕ್ಟ್ ನೀಡಿದೆ. ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ ಪದೇಪದೆ ಮಾತನಾಡಿದ್ದೂ ಕೂಡ ಸಾಕಷ್ಟು ಎಫೆಕ್ಟ್ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಹೇಳಿದರು