ಬೆಂಗಳೂರು: ವಿದ್ಯುತ್ ಪ್ರವಹಿಸಿ ಇಂಜಿನಿಯರ್ ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದ ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಜರುಗಿದೆ
Channapatna by elections: ಒಂದೇ ವೇದಿಕೆಯಲ್ಲಿ ಡಿ.ಕೆ ಶಿವಕುಮಾರ್, ಸಿ.ಪಿ ಯೋಗೇಶ್ವರ್! ಅಪರೂಪದ ಮಾತುಕತೆ
ಬೆಂಗಳೂರಿನ ನಿವಾಸಿ 27 ವರ್ಷದ ಕೌಶಿಕ್ ಮೃತ ರ್ದುದೈವಿ. ಪ್ಯಾನಲ್ ಬೋರ್ಡ್ ತಯಾರಿ ವೇಳೆ ಕೌಶಿಕ್ಗೆ ಕರೆಂಟ್ ಶಾಕ್ ಹೊಡೆದಿತ್ತು. ಬಳಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಕೌಶಿಕ್ ಕೊನೆಯುಸಿರೆಳೆದಿದ್ದಾರೆ.
ಸುರಕ್ಷತಾ ಕ್ರಮಕೈಗೊಳ್ಳದಿದ್ದರಿಂದ ದುರಂತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.