ಮುಂಬೈ :- ಬಿಲ್ ವಿವಾದದಿಂದ ವ್ಯಕ್ತಿಯೊಬ್ಬ ತನ್ನ ಸ್ವಂತ ಮಾಲೀಕನನ್ನು ಕೊಂದಿರುವ ಘಟನೆ ಗೋವಂಡಿಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ 63 ವರ್ಷದ ಆರೋಪಿಯನ್ನು ಶಿವಾಜಿ ನಗರ ಪೊಲೀಸರು ಬಂಧಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೋಷಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ: ಅಶ್ಲೀಲ ವಿಡಿಯೋ ಶೇರ್ ಮಾಡಿದ್ರೆ ಜೈಲಿಗೆ ಹೋಗ್ತೀರಿ ಹುಷಾರ್..!
ಗೋವಂಡಿಯಲ್ಲಿ ಈ ಅಮಾನವೀಯ ರೀತಿಯ ಕೊಲೆ ನಡೆದಿದೆ. ಪೊಲೀಸ್ ಮಾಹಿತಿ ಪ್ರಕಾರ, ಆರೋಪಿಯ ಹೆಸರು ಅಬ್ದುಲ್ ಶೇಖ್ ಮತ್ತು ಮೃತರ ಹೆಸರು ಗಣಪತಿ ಝಾ ಇವರು ಬಂಗನವಾಡಿಯಲ್ಲಿ ವಾಸವಾಗಿದ್ದರು. ಗುರುವಾರದಿಂದ ಬಂಗನವಾಡಿಯ ಗಣಪತಿ ಅವರ ನಿವಾಸದಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಬಾಗಿಲು ತೆರೆದು ಒಳಗೆ ಪ್ರವೇಶಿಸಿದಾಗ ಎದುರಿಗಿದ್ದ ದೃಶ್ಯ ಕಂಡು ಬೆಚ್ಚಿಬಿದ್ದರು. ಮನೆಯೊಳಗೆ ಗಣಪತಿ ಅವರ ಶವ ಕೊಳೆತ ಸ್ಥಿತಿಯಲ್ಲಿ ಬಿದ್ದಿತ್ತು.
ಎರಡು ದಿನಗಳ ಹಿಂದೆ ಗಣಪತಿ ಅವರು ಮೃತಪಟ್ಟಿರುವುದು ದೃಢಪಟ್ಟಿದೆ. ಈ ಪ್ರಕರಣವನ್ನು ಭೇದಿಸಲು ಪೊಲೀಸರು ಅಕ್ಕಪಕ್ಕದ ಮನೆಯವರನ್ನು ಹಾಗೂ ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಮೃತರ ಸಹೋದರ ದಿನೇಶ್ ಅವರಿಂದ ಮಹತ್ವದ ಮಾಹಿತಿ ಸಿಕ್ಕಿದೆ. ಕೆಲವು ದಿನಗಳ ಹಿಂದೆ ಗಣಪತಿ ತನ್ನ ಮನೆಯಲ್ಲಿ ಬಾಡಿಗೆಗಿದ್ದ ಅಬ್ದುಲ್ ಶೇಖ್ ಎಂಬಾತನ ಜತೆ ಜಗಳ ಮಾಡಿಕೊಂಡಿರುವುದು ಪೊಲೀಸರಿಗೆ ಗೊತ್ತಾಗಿದೆ. ನಂತರ ಪೊಲೀಸರು ಅಬ್ದುಲ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ.