ಬೆಂಗಳೂರು:- ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ಕಾಲೇಜಿನಲ್ಲಿ ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಆರ್ಸಿಬಿ ಕ್ಯಾಪ್ಟನ್ಸಿಗೆ ಈ ಇಬ್ಬರು ನಡುವೆ ಭಾರೀ ಪೈಪೋಟಿ!.. KL ರಾಹುಲ್ ಸಿಗುತ್ತಾ ಸ್ಥಾನ..!,
21 ವರ್ಷದ ರಾಹುಲ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎನ್ನಲಾಗಿದೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬ, ಕೆಲ ವರ್ಷಗಳಿಂದ ಬಳ್ಳಾರಿಯಲ್ಲಿ ನೆಲೆಸಿದ್ದರು. ಇನ್ನು ಮೃತ ವಿದ್ಯಾರ್ಥಿ ರಾಹುಲ್, ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ(ಮೇ.14) ಪರೀಕ್ಷೆಗೆ ರಾಹುಲ್ ತಡವಾಗಿ ಬಂದಿದ್ದ, ಈ ವಿಚಾರವಾಗಿ ಕಾಲೇಜಿನಲ್ಲಿ ರಾಹುಲ್ನನ್ನು ನಿಂದಿಸಿರುವ ಅನುಮಾನ ಇದ್ದು, ಇದರಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಕೂಡ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)