ದಾವಣಗೆರೆ:- ದೇಶದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲಬೇಕೆಂದ ಈಶ್ವರಪ್ಪಗೆ ಸಂಕಷ್ಟ ಎದುರಾಗಿದ್ದು, FIR ದಾಖಲಾಗಿದೆ.
ಜೆಡಿಎಸ್ ಶಾಸಕರಿಗೆ ಕಾಂಗ್ರೆಸ್ ಗಾಳ ವಿಚಾರ – ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ ಇಬ್ಬರು ಶಾಸಕರು!
ಹನುಮಂತಪ್ಪ ಎಂಬುವವರು ನೀಡಿದ ದೂರು ಆಧರಿಸಿ ಐಪಿಸಿ ಸೆಕ್ಷನ್ 505(1)ಸಿ, 505(2), 506ರ ಅಡಿ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ್ ಕುಲಕರ್ಣಿ ರೀತಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೆಎಸ್ ಈಶ್ವರಪ್ಪ ಆಗ್ರಹಿಸಿದ್ದರು. ಸದ್ಯ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.